ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಬ್ಯಾಂಕ್ ಸಿಬ್ಬಂದಿ ಕಿರುಕುಳ; ಬೆಂಕಿ ಹಚ್ಚಿಕೊಂಡು ತಾಯಿ ಮಕ್ಕಳು ಆತ್ಮಹತ್ಯೆ!

Shilpa D

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಅಂಬಲಪಾಡಿ ಮೂಲದವರಾದ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಮೃತಪಟ್ಟ ಮಹಿಳೆ ಸುಕನ್ಯ (58). ನಿಖಿತ್, ನಿಶ್ಚಿತ ಮೃತ ಪಟ್ಟಿರುವ ಅವಳಿ ಮಕ್ಕಳು. ನಿನ್ನೆ ಸಂಜೆ ಬ್ಯಾಂಕ್ ಸಿಬ್ಬಂದಿಗಳು ಮನೆಗೆ ಆಗಮಿಸಿ ಸಾಲದ ಹಣ ವಾಪಸು ಕೇಳಿದ್ದರು. ಗಂಡ ಮನೆಯಲ್ಲಿರದ ವೇಳೆ ಬ್ಯಾಂಕ್ ಸಿಬ್ಬಂದಿ ಬಂದಿದ್ದರು ಎಂದು ಗೊತ್ತಾಗಿದೆ.

ಖಾಸಗಿ ಬ್ಯಾಂಕ್‌ ನಲ್ಲಿ ಸಾಲ ಪಡೆದಿದ್ದರು, ಬ್ಯಾಂಕ್ ಸಿಬ್ಬಂದಿಯ ಬೆದರಿಕೆಗೆ ಹೆದರಿ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜೆ‌ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

SCROLL FOR NEXT