ಬಂಧಿತ ಆರೋಪಿಗಳಿಂದ ವಶ ಪಡಿಸಿಕೊಂಡ ಆಯುಧಗಳು 
ರಾಜ್ಯ

ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಕೊಡಿಗೆಹಳ್ಳಿ ಪೋಲೀಸರಿಂದ ಗ್ವಾಲಿಯರ್‌ ನಲ್ಲಿ ನಾಲ್ವರ ಬಂಧನ

ಮಧ್ಯಪ್ರದೇಶ ಪೊಲೀಸರೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕೊಡಿಗೇಹಳ್ಳಿ ಪೊಲೀಸರು ಕಳೆದ ಗುರುವಾರ ದೇವಿನಗರದ ಲಕ್ಷ್ಮಿ ಬ್ಯಾಂಕರ್ ಮತ್ತು ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದ ದರೋಡೆ ಯತ್ನದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಮಧ್ಯಪ್ರದೇಶ ಪೊಲೀಸರೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕೊಡಿಗೇಹಳ್ಳಿ ಪೊಲೀಸರು ಕಳೆದ ಗುರುವಾರ ದೇವಿನಗರದ ಲಕ್ಷ್ಮಿ ಬ್ಯಾಂಕರ್ ಮತ್ತು ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದ ದರೋಡೆ ಯತ್ನದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ.

ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಇಬ್ಬರನ್ನು ಗಾಯಗೊಳಿಸಿದ್ದರು. ಬಂಧಿಸಲ್ಪಟ್ಟ ಮತ್ತೊಬ್ಬ ಆರೋಪಿಗೂ ಬುಲೆಟ್ ಗಾಯಗಳಾಗಿದ್ದು, ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಆರೋಪಿಗಳನ್ನು ಖಾನಾ ಶರ್ಮಾ (23), ಪ್ರದೀಪ್ ಶರ್ಮಾ (37) ಮತ್ತು ಆಶು ಶರ್ಮಾ (27) ಎಂದು ಗುರುತಿಸಲಾಗಿದೆ. ಸೂರಜ್ (30) ಎಂಬಾತ ಗುಂಡಿಗೆ ಬಲಿಯಾದ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ವಿಕಾಸ್ ಪಂಡಿತ್ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳ ವಿರುದ್ಧ ಹೆಚ್ಚಿನ ಪ್ರಕರಣಗಳಿವೆ, ಖಾನಾ ಶರ್ಮಾ ವಿರುದ್ಧ ಮಧ್ಯಪ್ರದೇಶದ ಮೊರೆನಾ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳಿವೆ.

ಗುರುವಾರ ಲಕ್ಷ್ಮೀ ಬ್ಯಾಂಕ್ ಮತ್ತು ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ನಾಲ್ವರು ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ದೋಚಲು ಯತ್ನಿಸಿದ್ದರು. ಕಾರ್ಮಿಕರು ಪ್ರತಿರೋಧ ತೋರಿದ್ದರಿಂದ ಗುಂಡು ಹಾರಿಸಿದ್ದು, ಅಂಗಡಿ ಮಾಲೀಕ ಹಾಪುರಂ (38), ಅವರ ಸೋದರಳಿಯ ಆನಂದ ರಾಮ್ (25) ಗಾಯಗೊಂಡಿದ್ದರು.

ತನಿಖೆಯ ಸಮಯದಲ್ಲಿ, ಅಪರಾಧದ ಸ್ಥಳದಲ್ಲಿ ಕಂಡುಬಂದ ಬೆರಳಚ್ಚು ಆರೋಪಿಯ ಬಗ್ಗೆ ಸುಳಿವು ನೀಡಿತು. ದುಷ್ಕರ್ಮಿಗಳು ಗ್ವಾಲಿಯರ್‌ನ ಮೊರೆನಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಅನಂತರ ವಿಶೇಷ ತಂಡಗಳನ್ನು ರಚಿಸಲಾಯಿತು ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ನಾವು ನಾಲ್ವರು ಆರೋಪಿಗಳನ್ನು ಗ್ವಾಲಿಯರ್ ರೈಲು ನಿಲ್ದಾಣದಲ್ಲಿ ಬಂಧಿಸಿದ್ದೇವೆ.

ಜುವೆಲರಿ ಅಂಗಡಿಯಲ್ಲಿ ನಡೆದ ಗಲಾಟೆಯಲ್ಲಿ ನಾಲ್ವರ ಪೈಕಿ ಸೂರಜ್ ಕುತ್ತಿಗೆಗೆ ಗುಂಡು ತಗುಲಿತ್ತು,. ಅವರನ್ನು ಗ್ವಾಲಿಯರ್‌ನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ದರೋಡೆಗೆ ಒಂದು ದಿನ ಮೊದಲು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಮೋಟಾರ್‌ಸೈಕಲ್ ಕಳವು ಮಾಡಿದ್ದರು, ಘಟನೆ ನಡೆಯುವ ಎರಡು ಗಂಟೆಗಳ ಮೊದಲು ವಿದ್ಯಾರಣ್ಯಪುರದಿಂದ ಮತ್ತೊಂದು ವಾಹನವನ್ನು ಕಳ್ಳತನ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಯಿಂದ ನಾಲ್ಕು ಪಿಸ್ತೂಲ್‌ಗಳು, 12 ಬುಲೆಟ್‌ಗಳು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT