ಸಂಗ್ರಹ ಚಿತ್ರ PTI
ರಾಜ್ಯ

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಭರ್ಜರಿ ಬೇಟೆ; 5.85 ಕೋಟಿ ರೂ. ನಗದು, 21.48 ಕೋಟಿ ರೂ. ಮೌಲ್ಯದ ಮದ್ಯ ವಶ!

ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 21.48 ಕೋಟಿ ಮೌಲ್ಯದ ಮದ್ಯ ಹಾಗೂ 5.85 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 21.48 ಕೋಟಿ ಮೌಲ್ಯದ ಮದ್ಯ ಹಾಗೂ 5.85 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ತಲಾ 14 ಕ್ಷೇತ್ರಗಳಲ್ಲಿ ಚುನಾವಣೆಗೆ ಮತದಾನ ನಡೆಯಲಿದೆ.

ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಫ್ಲೈಯಿಂಗ್ ಸ್ಕ್ವಾಡ್, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 5.85 ಕೋಟಿ ರೂಪಾಯಿ ನಗದು, 5.87 ಲಕ್ಷ ರೂಪಾಯಿ ಉಚಿತ ಉಡುಗೊರೆಗಳು, 21.48 ಕೋಟಿ ರೂಪಾಯಿ ಮೌಲ್ಯದ 6.84 ಲಕ್ಷ ಲೀಟರ್ ಮದ್ಯ, 15 ಲಕ್ಷಕ್ಕೂ ಹೆಚ್ಚು ಮೌಲ್ಯದ 24.3 ಕೆಜಿ ಮಾದಕ ವಸ್ತುಗಳು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಲೋಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದು 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. 47,868 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ. 827 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂಟು ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಪಡಿಸಲಾಗಿದೆ. 2,173 ಪ್ರಕರಣಗಳನ್ನು ಸಿಆರ್‌ಪಿಸಿಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ. ಈ ಪೈಕಿ 2,725 ಜನರನ್ನು ಬಂಧಿಸಲಾಯಿತು.

ವಿಜಯಪುರ ಸೈಬರ್, ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಪೊಲೀಸ್ ಠಾಣೆ ತಂಡವು ಬಿಜಾಪುರ ಸಂಸದೀಯ ಕ್ಷೇತ್ರ, ವಿಜಯಪುರ ತಾಲೂಕು ಮತ್ತು ಜಿಲ್ಲೆಯಲ್ಲಿ 2,93,50,000 ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಳ್ಳಾರಿ ಜಿಲ್ಲೆ, ಬಳ್ಳಾರಿ ಸಂಸದೀಯ ಕ್ಷೇತ್ರ, ಸಿರಗುಪ್ಪ ತಾಲೂಕಿನಲ್ಲಿ ತಂಡ 32,92,500 ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಕೊಪ್ಪಳ ಸಂಸದೀಯ ಕ್ಷೇತ್ರದ ಯಲಬುರ್ಗಾ ತಾಲೂಕಿನ ಬನ್ನಿಕೊಪ್ಪ ಚೆಕ್‌ಪೋಸ್ಟ್‌ನಲ್ಲಿ ಸ್ಥಾಯಿ ಕಣ್ಗಾವಲು ತಂಡವು ಇನ್ನೂ 50,00,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಮತದಾರರ ಸಹಾಯವಾಣಿ ಮೂಲಕ ಬಂದ 1,740 ಕರೆಗಳಲ್ಲಿ 1,737 ಜನರು ಮಾಹಿತಿ ನೀಡಿದ್ದಾರೆ. ಮೂವರು ದೂರು ದಾಖಲಿಸಿದ್ದಾರೆ. 1,740 ಕರೆಗಳನ್ನು ವಿಲೇವಾರಿ ಮಾಡಲಾಗಿದೆ. ಜೊತೆಗೆ, 6,943 ದೂರುಗಳನ್ನು ನಾಗರಿಕರು NGSP (ರಾಷ್ಟ್ರೀಯ ಕುಂದುಕೊರತೆಗಳ ಸೇವಾ ಪೋರ್ಟಲ್) ನಲ್ಲಿ ನೋಂದಾಯಿಸಿದ್ದಾರೆ. ಅವುಗಳಲ್ಲಿ 6,368 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT