ಚುನಾವಣಾ ಕರ್ತವ್ಯದಲ್ಲಿರುವ ಪೊಲೀಸರು ಮತ್ತು ಇತರೆ ಸಿಬ್ಬಂದಿ ಬುಧವಾರ ಬೆಂಗಳೂರಿನಲ್ಲಿ ಮಾದರಿ ಸಂಹಿತೆ ಪ್ರಕಾರ ವಾಹನವನ್ನು ತಪಾಸಣೆ ನಡೆಸಿದರು. 
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 27,62,47,214 ರೂ. ಮೌಲ್ಯದ ವಸ್ತುಗಳ ವಶ, 205 ಎಫ್‌ಐಆರ್‌ ದಾಖಲು

ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಅಬಕಾರಿ ಇಲಾಖೆಯು 249 ಅಪರಾಧ ಪ್ರಕರಣಗಳು, 206 ಪರವಾನಗಿ ಷರತ್ತು ಉಲ್ಲಂಘನೆ ಪ್ರಕರಣಗಳು, 13 ಎನ್‌ಡಿಪಿಎಸ್ ಮತ್ತು 822 ಪ್ರಕರಣಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965ರ ಸೆಕ್ಷನ್ 15 (ಎ) ಅಡಿಯಲ್ಲಿ ದಾಖಲಿಸಲಾಗಿದೆ ಮತ್ತು 156 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

6,10,000 ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಒಟ್ಟು 27,62,47,214 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯಪುರ ಸಂಸದೀಯ ಕ್ಷೇತ್ರದಲ್ಲಿ 2,93,50,000 ರೂ.ನಗದನ್ನು ವಿಜಯಪುರ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಪೊಲೀಸ್ ಠಾಣೆ ತಂಡ ಮತ್ತು ಬಳ್ಳಾರಿಯ ಸಿರಗುಪ್ಪ ತಾಲ್ಲೂಕಿನಲ್ಲಿ ಎಸ್‌ಎಸ್‌ಟಿ ತಂಡ 32,92,500 ರೂ. ಹಾಗೂ ಬನ್ನಿಕೊಪ್ಪ ಚೆಕ್ ಪೋಸ್ಟ್, ಯಲಬುರ್ಗಾ ತಾಲ್ಲೂಕು, ಕೊಪ್ಪಳದಲ್ಲಿ 50,00,000 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಾವಲು ಪಡೆಯಲ್ಲಿ 10 ವಾಹನಗಳು

ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಒಂದೇ ಬಾರಿಗೆ 10ಕ್ಕಿಂತ ಹೆಚ್ಚು ವಾಹನಗಳನ್ನು ರಾಜಕೀಯ ರ್ಯಾಲಿಗೆ ಬಳಸುತ್ತಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ತಿಳಿಸಿದ್ದಾರೆ.

ಒಂದು ಬೆಂಗಾವಲು ಪಡೆಯಲ್ಲಿ ಕೇವಲ 10 ವಾಹನಗಳು ಮಾತ್ರ ಚಲಿಸಬಹುದು ಮತ್ತು ಎರಡು ಬೆಂಗಾವಲು ಪಡೆಗಳ ನಡುವೆ ಕನಿಷ್ಠ 100 ಮೀಟರ್ ಅಂತರವಿರಬೇಕು. ಅಲ್ಲದೆ, ಪ್ರಚಾರದ ಸಮಯದಲ್ಲಿ ಒಂದು ವಾಹನದಲ್ಲಿ ಮಾತ್ರ ಧ್ವಜ ಅಳವಡಿಕೆಗೆ ಅವಕಾಶ ನೀಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಸುಮಾರು 80 ವಾಹನಗಳನ್ನು ಬೆಂಗಾವಲು ಪಡೆಯಲ್ಲಿ ಬಳಸಿದ್ದಕ್ಕಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದರು.

ಪರ್ಯಾಯ ದಾಖಲೆಗಳು

ಎಲ್ಲಾ ಮತದಾರರು ಮತದಾನದ ಮೊದಲು ಮತದಾನ ಕೇಂದ್ರಗಳಲ್ಲಿ ತಮ್ಮ ಗುರುತಿಗಾಗಿ EPIC ಅನ್ನು ಹಾಜರುಪಡಿಸುವ ನಿರೀಕ್ಷೆಯಿದೆ. EPIC ಅನ್ನು ಪಡೆಯಲು ಸಾಧ್ಯವಾಗದ ಮತದಾರರು ಈ ಕೆಳಗಿನ ಯಾವುದಾದರೊಂದು ಪರ್ಯಾಯ ಫೋಟೋ ಗುರುತಿನ ದಾಖಲೆಗಳನ್ನು ಒದಗಿಸಬೇಕು. ಆಧಾರ್ ಕಾರ್ಡ್, MGNREGA ಜಾಬ್ ಕಾರ್ಡ್, ಬ್ಯಾಂಕ್‌ಗಳು/ಅಂಚೆ ಕಚೇರಿಯಿಂದ ನೀಡಲಾದ ಭಾವಚಿತ್ರವಿರುವ ಪಾಸ್‌ಬುಕ್‌ಗಳು, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್ ಮತ್ತು ಪಾಸ್‌ಪೋರ್ಟ್ ಇತ್ಯಾದಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT