ಅತ್ತಿಗುಪ್ಪೆ ಮೆಟ್ರೋ ನಿಲ್ದಾಣ 
ರಾಜ್ಯ

ಅತ್ತಿಗುಪ್ಪೆ: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ.

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನ 2-10 ನಿಮಿಷದಲ್ಲಿ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮೆಟ್ರೋ ರೈಲಿನ ಅಡಿಯಲ್ಲಿ ಸಿಲುಕಿದ್ದ ಶವವನ್ನು ಕೆಲಕಾಲ ಹರಸಾಹಸದ ಬಳಿಕ ಹೊರಗೆ ತರಲಾಯಿತು.

ಮೃತ ವಿದ್ಯಾರ್ಥಿಯನ್ನು ನ್ಯಾಷನಲ್ ಲಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಧ್ರುವ್ ಎಂದು ಗುರುತಿಸಲಾಗಿದೆ. ಆತನ ರುಂಡ, ಮುಂಡ ಬೇರ್ಪಟ್ಟಿದ್ದು, ದೇಹ ಛಿದ್ರಗೊಂಡಿತ್ತು. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮೆಟ್ರೋ ಪಿಆರ್ ಒ ಯಶವಂತ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಮೊಬೈಲ್ ನಲ್ಲಿ ಮಾತನಾಡಿಕೊಂಡೆ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಕೆಲಕಾಲ ಮಾಗಡಿ ರಸ್ತೆ ಮತ್ತು ವೈಟ್ ಫೀಲ್ಡ್ ನಡುವಣ ಮಾತ್ರ ರೈಲು ಸಂಚಾರವಿತ್ತು. ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ತಾತ್ಕಾಲಿಕವಾಗಿ ರೈಲು ಸಂಚಾರ ಸ್ಥಗಿತವಾಗಿತ್ತು. ಬಳಿಕ ಈ ಮಾರ್ಗದಲ್ಲಿ ರೈಲು ಸಂಚಾರ ಪುನರ್ ಆರಂಭವಾಗಿದೆ.

ಚಂದ್ರಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಿಎಂಆರ್ ಸಿಎಲ್ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು ಮಹಜರು ನಡೆಸುತ್ತಿರುವುದರಿಂದ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ನಡುವಿನ ಮಾರ್ಗದಲ್ಲಿ ತಾತ್ಕಾಲಿಕವಾಗಿ ರೈಲ್ವೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!