ಮೆಟ್ರೋ ಹಳಿ 
ರಾಜ್ಯ

ಬೆಂಗಳೂರು: ಮೆಟ್ರೋ ಹಳಿಗೆ ಹಾರುವ ಮುನ್ನ ಪೋಷಕರಿಗೆ ಫೋನ್ ಮಾಡಿದ್ದ ವಿದ್ಯಾರ್ಥಿ!

ಮೆಟ್ರೋ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ ಧ್ರುವ್ ಠಕ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಾಗೂ ತನ್ನ ಜೀವನ ಅರ್ಥಹೀನ ಎಂದು ಆಗಾಗ್ಗೆ ಭಾವಿಸುತ್ತಿದ್ದ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.

ಬೆಂಗಳೂರು: ಮೆಟ್ರೋ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ ಧ್ರುವ್ ಠಕ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಾಗೂ ತನ್ನ ಜೀವನ ಅರ್ಥಹೀನ ಎಂದು ಆಗಾಗ್ಗೆ ಭಾವಿಸುತ್ತಿದ್ದ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಮೊದಲ ವರ್ಷದ ಬಿಎ ಎಲ್ಎಲ್ಬಿ ವಿದ್ಯಾರ್ಥಿಯಾಗಿರುವ ಧ್ರುವ್, ಮಾನಸಿಕ ಖಿನ್ನತೆಗೆ ಔಷಧಿಗಳನ್ನು ಪಡೆಯುತ್ತಿದ್ದ. ಈ ಬಗ್ಗ ಆತನ ಕುಟುಂಬಸ್ಥರಿಗೂ ತಿಳಿದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾಗರಭಾವಿಯ ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಧ್ರುವ್, ಆತ್ಮಹತ್ಯೆ ಬಗ್ಗೆ ಕಾಲೇಜು ಸ್ನೇಹಿತರೊಂದಿಗೆ ಆಗಾಗ್ಗೆ ಹೇಳಿಕೊಳ್ಳುತ್ತಿದ್ದ. ನಿನ್ನೆ ಮೆಟ್ರೋ ಹಳಿಗೆ ಹಾರುವುದಕ್ಕೂ ಮುನ್ನ ಪೋಷಕರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದು, ತನ್ನ ಜೀವನ ಅರ್ಥಹೀನ ಎಂದು ಹೇಳಿಕೊಂಡಿದ್ದಾನೆ. ಈ ವೇಳೆ ಪೋಷಕರು ಕಬ್ಬನ್ ಪಾರ್ಕ್'ಗೆ ಹೋಗಿ ಕೆಲ ಕಾಲ ಸಮಯ ಕಳೆಯುವಂತೆಯೂ ಹೇಳಿದ್ದಾರೆ. ನಂತರ ಫೋನ್ ಕಟ್ ಮಾಡಿರುವ ಧ್ರುವ್ ತನ್ನ ಲೊಕೇಷನ್ ನನ್ನು ಪೋಷಕರಿಗೆ ವಾಟ್ಸಾಪ್ ಮೂಲಕ ಹಂಚಿಕೊಂಡು, ಹಳಿಗೆ ಹಾರಿದ್ದಾನೆ.

ನಂತರ ಧ್ರುವ್ ಪೋಷಕರಿಗೆ ಮಗನನನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಬಳಿಕ ಆತನ ಸ್ನೇಹಿತರಿಗೆ ಕರೆ ಮಾಡಿ, ಮಗನಿರುವ ಸ್ಥಳಕ್ಕೆ ಹೋಗಿ ಪರಿಶೀಲಿಸುವಂತೆ ತಿಳಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಎಲ್‌ಎಸ್‌ಐಯು ಉಪಕುಲಪತಿ ಸುಧೀರ್ ಕೃಷ್ಣಸ್ವಾಮಿ ಅವರು ಮಾತನಾಡಿ, ವಿದ್ಯಾರ್ಥಿಯೊಬ್ಬನ ಹಠಾತ್ ಮತ್ತು ಅನಿರೀಕ್ಷಿತ ನಿಧನದಿಂದ ವಿಶ್ವವಿದ್ಯಾನಿಲಯವು ತೀವ್ರ ಆಘಾತ ಮತ್ತು ದುಃಖಿತವಾಗಿದೆ. ಗೌರವಾರ್ಥವಾಗಿ, ವಿಶ್ವವಿದ್ಯಾನಿಲಯವು ವಾರದ ಉಳಿದ ಅವಧಿಗೆ ತರಗತಿಗಳನ್ನು ಸ್ಥಗಿತಗೊಳಿಸುತ್ತದೆ ಎಂದು ಹೇಳಿದ್ದಾರೆ, ಘಟನೆ ಸಂಬಂಧ ಚಂದ್ರಾ ಲೇಔಟ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT