ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ; ನಿವಾಸಿಗಳಲ್ಲಿ ಆತಂಕ

ತಾಲ್ಲೂಕಿನ ಮನಸೂರಿನ ಕರಿಯಮ್ಮ ಗುಡಿ ಸಮೀಪದ ಕೊಟ್ಟಿಗೆಗೆ ಚಿರತೆ ನುಗ್ಗಿ ಹಸುುವಿನ ಕರುವನ್ನು ಕೊಂದಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಧಾರವಾಡ: ತಾಲ್ಲೂಕಿನ ಮನಸೂರಿನ ಕರಿಯಮ್ಮ ಗುಡಿ ಸಮೀಪದ ಕೊಟ್ಟಿಗೆಗೆ ಚಿರತೆ ನುಗ್ಗಿ ಹಸುುವಿನ ಕರುವನ್ನು ಕೊಂದಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಬುಧವಾರ ಕರ್ನಾಟಕ ವಿಶ್ವವಿದ್ಯಾಲಯ ಪಕ್ಕದ ಶಾಂಭವಿ ನಗರದಲ್ಲಿ ಸ್ಥಳೀಯರೊಬ್ಬರಿಗೆ ಬುಧವಾರ ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಹಾಸ್ಟೆಲ್ ನಲ್ಲಿ ವಾಸಿಸುವ ವಿದ್ಯಾರ್ಥಿಗಳು ಭಯದ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ವಿಶ್ವವಿದ್ಯಾನಿಲಯದ ಪಕ್ಕದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಆದರೆ ಅವರಿಗೆ ಚಿರತೆ ಚಲನವಲನ ಸ್ಪಷ್ಟವಾಗಿ ಕಂಡಿಲ್ಲ.

ವಿಶ್ವವಿದ್ಯಾನಿಲಯದ ಬಳಿ ಕಾಣಿಸಿಕೊಂಡ ಚಿರತೆ ಗುಡ್ಡಗಾಡು ಪ್ರದೇಶವಾದ ಮನ್ಸೂರ್ ಗ್ರಾಮದ ಕಡೆಗೆ ತೆರಳಿರಬಹುದು ಎಂದು ಅರಣ್ಯಾಧಿಕಾರಿ ಶಂಕಿಸಿದ್ದಾರೆ. ಚಿರತೆ ಹಳಿಯಾಳ ಅರಣ್ಯದಿಂದ ಆಹಾರ ಮತ್ತು ನೀರು ಹುಡುಕಿಕೊಂಡು ಬಂದಿರಬಹುದು ಎಂದು ಹೇಳಿದ್ದಾರೆ.

ಕರುವನ್ನು ಕಳೆದುಕೊಂಡ ರೈತನಿಂದ ನಮಗೆ ದೂರು ಬಂದಿದ್ದು, ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಪ್ಪಿಸಲು ನಾವು ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ ಮತ್ತು ಈ ಪ್ರದೇಶದಲ್ಲಿ ಚಿರತೆ ಪತ್ತೆಹಚ್ಚಲು ಡ್ರೋನ್‌ಗಳನ್ನು ಸಹ ಬಳಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT