ಸಂಗ್ರಹ ಚಿತ್ರ 
ರಾಜ್ಯ

ಪಂಚ ಸೂತ್ರಗಳ ಪಾಲಿಸಿ, ನೀರಿನ ಬಳಕೆ ಮಿತಗೊಳಿಸಿ: BWSSB

ನೀರು ಉಳಿಕೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪಂಚ ಸೂತ್ರಗಳ ಅಳವಡಿಸಿಕೊಳ್ಳಲು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ (BAF) ಸಿದ್ಧವಾಗಿದೆ ಎಂದು ಬಿಡಬ್ಲ್ಯೂಎಸ್ಎಸ್'ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಶನಿವಾರ ಹೇಳಿದರು.

ಬೆಂಗಳೂರು: ನೀರು ಉಳಿಕೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪಂಚ ಸೂತ್ರಗಳ ಅಳವಡಿಸಿಕೊಳ್ಳಲು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ (BAF) ಸಿದ್ಧವಾಗಿದೆ ಎಂದು ಬಿಡಬ್ಲ್ಯೂಎಸ್ಎಸ್'ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಶನಿವಾರ ಹೇಳಿದರು.

ಬಿಎಎಫ್ ಸಹಯೋಗದಲ್ಲಿ ಶನಿವಾರ ಇಲ್ಲಿ ಆಯೋಜಿಸಿದ್ದ ಜಲ ಸಂರಕ್ಷಣೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ 30 ಕ್ಲಸ್ಟರ್ ಗಳನ್ನು ಹೊಂದಿದ್ದು, ಇದರಲ್ಲಿ 15 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಅಪಾರ್ಟ್ ಮೆಂಟ್ ಗಳಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಬೋರ್‌ವೆಲ್‌, ಟ್ಯಾಂಕರ್‌ ಹಾಗೂ ಕಾವೇರಿಯನ್ನು ಅವಲಂಬಿಸಿದ್ದಾರೆ. ಈ ಅಪಾರ್ಟ್‌ಮೆಂಟ್‌ಗಳಲ್ಲಿ ಸಾಕಷ್ಟು ನೀರಿನ ನಿರ್ವಹಣೆ ಮತ್ತು ಮಧ್ಯಮ ಬಳಕೆಯನ್ನು ಉತ್ತೇಜಿಸಲುೃ BWSSB ರೇಟಿಂಗ್ ನ್ನು ಪ್ರಾರಂಭಿಸಿದೆ.

ನೀರಿನ ಉಳಿತಾಯ, ಸಂಸ್ಕರಿಸಿದ ನೀರಿನ ಬಳಕೆ, ಬೋರ್‌ವೆಲ್ ನೀರು ಬಳಸುವಾಗ ತಂತ್ರಜ್ಞಾನ ಅಳವಡಿಸಿಕೊಳ್ಳುವುದು, ಮಳೆನೀರು ಕೊಯ್ಲು ಘಟಕಗಳ ಸ್ಥಾಪನೆ ಎಂಬ 5 ಸೂತ್ರಗಳನ್ನು ಮಂಡಳಿ ಆರಂಭಿಸಿದೆ. ಈ ಪಂಚಸೂತ್ರಗಳ ಅಳವಡಿಕೆಯಿಂದ ನೀರಿನ ಬಳಕೆಯನ್ನು ಶೇ.30ರಷ್ಟು ಕಡಿಮೆ ಮಾಡಬಹುದು ಎಂದು ಹೇಳಿದರು.

ಒಬ್ಬ ವ್ಯಕ್ತಿಗೆ ದಿನಕ್ಕೆ ಸುಮಾರು 50 ಲೀಟರ್ ನೀರು ಬೇಕಾಗುತ್ತದೆ. ಶೇ.20ರಷ್ಟು ಸಂಸ್ಕರಿಸಿದ ನೀರನ್ನು ಬಳಸುವುದರಿಂದ ಶೇ.30ರಷ್ಟು ಕಾವೇರಿ ನೀರನ್ನು ಉಳಿಸಬಹುದು. ಉಳಿಸಿದ ನೀರನ್ನು ಸಂಕಷ್ಟ ಪೀಡಿತ ಪ್ರದೇಶಗಳಿಗೆ ಹರಿಸಬಹುದು ಎಂದು ತಿಳಿಸಿದರು.

ಕಾವೇರಿ, ಬೋರ್‌ವೆಲ್‌ಗಳು, ಸಂಸ್ಕರಿಸಿದ ನೀರು ಮತ್ತು ಟ್ಯಾಂಕರ್‌ಗಳಂತಹ ನೀರಿನ ಮೂಲಗಳ ಬಗ್ಗೆ ಬಿಡಬ್ಲ್ಯುಎಸ್‌ಎಸ್‌ಬಿ ಮಾಹಿತಿ ಸಂಗ್ರಹಿಸುತ್ತಿದೆ. ಮಾಹಿತಿ ಆಧರಿಸಿ, BWSSB ಅಪಾರ್ಟ್‌ಮೆಂಟ್‌ಗಳಿಗೆ ಅಗತ್ಯವಿರುವ ನೀರನ್ನು ಪೂರೈಸುತ್ತದೆ.

ಇದೇ ವೇಳೆ ನೀರಿನ ಮೀಟರ್‌ಗಳನ್ನು ಅಳವಡಿಸುವ ಕುರಿತು ಫೆಡರೇಶನ್‌ ಮಾಡಿರುವ ಮನವಿ ಕುರಿತು ಮಾತನಾಡಿ, ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಮೀಟರ್ ಗಳನ್ನು ಅಳವಡಿಸಬಹುದು. ಈ ಬಗ್ಗೆ ಸರ್ಕಾರದ ಗಮನಕ್ಕೆ ತರುವಂತೆ ಬಿಡಬ್ಲ್ಯೂಎಸ್‌ಎಸ್‌ಬಿಗೆ ಮನವಿ ಸಲ್ಲಿಸಿ ಎಂದು ಫೆಡರೇಷನ್ ಸದಸ್ಯರಿಗೆ ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT