ಪ್ರಾತಿನಿಧಿಕ ಚಿತ್ರ 
ರಾಜ್ಯ

ಲೋಕಸಭೆ ಚುನಾವಣೆ: ರೌಡಿಶೀಟರ್‌ಗಳ ಮನೆ ಮೇಲೆ ದಾಳಿ; ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಸೂಚನೆ

ಪಶ್ಚಿಮ ವಿಭಾಗದ ಪೊಲೀಸರು ಶನಿವಾರ ಬೆಳಗ್ಗೆ 326 ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾಟನ್‌ಪೇಟೆ, ಕಲಾಸಿಪಾಳ್ಯ, ಜೆಜೆ ನಗರ ಮತ್ತು ಇತರ ಕಡೆಗಳಲ್ಲಿ ಮುಂಜಾನೆ ದಾಳಿ ನಡೆಸಲಾಯಿತು.

ಬೆಂಗಳೂರು: ಪಶ್ಚಿಮ ವಿಭಾಗದ ಪೊಲೀಸರು ಶನಿವಾರ ಬೆಳಗ್ಗೆ 326 ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾಟನ್‌ಪೇಟೆ, ಕಲಾಸಿಪಾಳ್ಯ, ಜೆಜೆ ನಗರ ಮತ್ತು ಇತರ ಕಡೆಗಳಲ್ಲಿ ಮುಂಜಾನೆ ದಾಳಿ ನಡೆಸಲಾಯಿತು. ಮತದಾನದ ವೇಳೆ ರೌಡಿಗಳು ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ.

ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ದಾಳಿ ನಡೆಸಲಾಗಿದ್ದು, ದಾಳಿ ನಡೆಸಿದ ಮನೆಗಳಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಮುಂಬರುವ ಲೋಕಸಭೆ ಸಂಸತ್ತಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ 231 ರೌಡಿಗಳು ಮನೆಯಲ್ಲಿದ್ದರು. ಪೊಲೀಸರು ಬೆರಳಚ್ಚು ಪಡೆದುಕೊಂಡಿದ್ದಾರೆ. ದಾಳಿಯ ವೇಳೆ ಸುಮಾರು 95 ರೌಡಿಗಳು ಮನೆಯಲ್ಲಿರಲಿಲ್ಲ ಮತ್ತು ಅವರ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಅವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.

ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ಪಶ್ಚಿಮ ವಿಭಾಗದ ಡಿಸಿಪಿ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ.

ದಕ್ಷಿಣ ವಿಭಾಗದ ಪೊಲೀಸರು ಗುರುವಾರ 234ಕ್ಕೂ ಹೆಚ್ಚು ರೌಡಿಶೀಟರ್‌ಗಳ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವುದನ್ನು ಸ್ಮರಿಸಬಹುದಾಗಿದೆ. ಜಯನಗರ, ಜೆಪಿ ನಗರ, ಸಿದ್ದಾಪುರ, ಬನಶಂಕರಿ, ಪುಟ್ಟೇನಹಳ್ಳಿ, ಸುಬ್ರಹ್ಮಣ್ಯಪುರ, ಕೋಣನಕುಂಟೆ, ತಲಘಟ್ಟಪುರ, ಗಿರಿನಗರ ಸೇರಿದಂತೆ 16 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT