ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 
ರಾಜ್ಯ

ಪ್ರವಾಸ ಕೈ ಬಿಡಿ, ಮತದಾನ ಮಾಡಿ: ಮತದಾರರಿಗೆ ತುಷಾರ್ ಗಿರಿನಾಥ್ ಮನವಿ

ಬೆಂಗಳೂರು ದಕ್ಷಿಣ, ಮಧ್ಯ ಮತ್ತು ಉತ್ತರ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 (ಶುಕ್ರವಾರ) ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾರರು ಮತ ಚಲಾಯಿಸುವ ಬದಲು ಪ್ರವಾಸದತ್ತ ಮುಖ ಮಾಡುವ ಸಾಧ್ಯತೆಳಿವೆ...

ಬೆಂಗಳೂರು: ಬೆಂಗಳೂರು ದಕ್ಷಿಣ, ಮಧ್ಯ ಮತ್ತು ಉತ್ತರ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 (ಶುಕ್ರವಾರ) ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾರರು ಮತ ಚಲಾಯಿಸುವ ಬದಲು ಪ್ರವಾಸದತ್ತ ಮುಖ ಮಾಡುವ ಸಾಧ್ಯತೆಳಿವೆ. ಹೀಗಾಗಿ ನಾಗರಿಕರು ತಪ್ಪದೇ ಮತದಾನ ಮಾಡುವಂತೆ ಉತ್ತೇಜಿಸುವಂತೆ ಹಾಗೂ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಯಲ್ಲಿ 353 ಮತಗಟ್ಟೆಗಳಲ್ಲಿ ಶೇ.5 ಕ್ಕಿಂತ ಕಡಿಮೆ ಮತದಾನವಾಗಿತ್ತು. ಹೀಗಾಗಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಆಯಾ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಮತದಾರರಲ್ಲಿ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಮೊದಲ ಬಾರಿಯ ಮತದಾರರಿಗೆ ಮತದಾನ ಮಾಡಲು ತಿಳಿಸಿ ಮತ್ತು ಇತರರಿಗೂ ತಪ್ಪದೆ ಮತದಾನ ಮಾಡುವಂತೆ ಪ್ರೋತ್ಸಾಹ ನೀಡಿ ಎಂದು ತಿಳಿಸಿ. ಅಂಗವಿಕಲ ಮತದಾರರು ಮತ್ತು 85 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತಪತ್ರದ ವ್ಯವಸ್ಥೆ ಇದ್ದು, ನಮೂನೆ 12ಡಿ ಮೂಲಕ ಭರ್ತಿ ಮಾಡಬೇಕು ಎಂದು ಹೇಳಿದರು.

ಮತದಾನದ ದಿನಾಂಕಕ್ಕಿಂತ 10 ದಿನಗಳ ಮೊದಲು ಪ್ರತಿ ಮನೆಗೆ ಮತದಾರರ ಚೀಟಿಯನ್ನು ತಪ್ಪದೆ ತಲುಪಿಸಬೇಕು. ಈ ಬಾರಿ ಮತದಾರರ ಚೀಟಿಯಲ್ಲಿ ಮತಗಟ್ಟೆ ಇರುವ ಸ್ಥಳ ಸೂಚಿಸುವ ಬಾರ್ ಕೋಡ್ ಇರಲಿದ್ದು, ಈ ಬಗ್ಗೆ ಮತದಾರರಿಗೆ ಮಾಹಿತಿ ನೀಡಬೇಕು. ಜೊತೆಗೆ ಚುನಾವಣಾ ದಿನಾಂಕ ಮುದ್ರಿತವಾಗಿರುವ ಚೀಟಿಗಳನ್ನು ಪ್ರತಿ ಮನೆಗೂ ತಲುಪಿಸಿ, ಮತ ಹಾಕುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT