ಕುಮಾರಸ್ವಾಮಿ ಲೇಔಟ್ ನಲ್ಲಿ ಗುಂಪು ಘರ್ಷಣೆ 
ರಾಜ್ಯ

ನಗರತ್ ಪೇಟೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಗುಂಪು ಘರ್ಷಣೆ!

ನಗರತ್ ಪೇಟೆ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಗುಂಪು ಘರ್ಷಣೆ ಪ್ರಕರಣ ವರದಿಯಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಮಧ್ಯರಾತ್ರಿ ಅನ್ಯಕೋಮಿನ ಗುಂಪೊಂದು ಕುಟುಂಬವೊಂದರ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ.

ಬೆಂಗಳೂರು: ನಗರತ್ ಪೇಟೆ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಗುಂಪು ಘರ್ಷಣೆ ಪ್ರಕರಣ ವರದಿಯಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಮಧ್ಯರಾತ್ರಿ ಅನ್ಯಕೋಮಿನ ಗುಂಪೊಂದು ಕುಟುಂಬವೊಂದರ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಪ್ರಗತಿಪರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಆಟೋ ಪಾರ್ಕಿಂಗ್ (Parking) ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದೆ. ಬನಶಂಕರಿಯ (Banashankari) ಪ್ರಗತಿಪರ ಬಡಾವಣೆಯಲ್ಲಿ ಆಟೋ ಪಾರ್ಕಿಂಗ್ ವಿಚಾರಕ್ಕೆ ಅನ್ಯಕೋಮಿನ ಯುವಕರು ಮನೆಗೆ ನುಗ್ಗಿ ಮಹಿಳೆಯರು (Woman), ಪುರುಷರು, ಮಕ್ಕಳು ಸೇರಿ 8 ಮಂದಿ ಮೇಲೆ ಅನ್ಯಕೋಮಿನ ಗುಂಪು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮಸೀದಿಯಿಂದ ಯುವಕರನ್ನು ಕರೆತಂದು ಹಲ್ಲೆ?

ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ಪ್ರಗತಿಪರ ಬಡಾವಣೆಯ ಕಿರಿದಾದ ರಸ್ತೆಯಲ್ಲಿ ಶಿವಕುಮಾರ್ ಅನ್ನೋರ ಮನೆ ಮುಂದೆ ಆಟೋ ಚಾಲಕನೊಬ್ಬ ಆಟೋ ಪಾರ್ಕ್ ಮಾಡ್ತಿದ್ದರು. ಇಲ್ಲಿ ಆಟೋ ನಿಲ್ಲಿಸಬೇಡಿ ಅಂದಿದ್ದಕ್ಕೆ ಮಾತಿನ ಚಕಮಕಿ ನಡೆಸಿದ ಅನ್ಯಕೋಮಿನ ವ್ಯಕ್ತಿ ಯುವಕರನ್ನ ಕರೆತಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಸಮೀಪದ ಮಸೀದಿಯಿಂದಲೂ ಮತ್ತಷ್ಟು ಜನರನ್ನ ಕರೆತಂದ ಯುವಕರ ಗುಂಪು, ಶಿವಕುಮಾರ್ ಎನ್ನುವವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಮನೆಯಲ್ಲಿದ್ದ ಮಹಿಳೆಯರು, ಮಕ್ಕಳ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಶಿವಕುಮಾರ್ ಕುಟುಂಬಸ್ಥರಿಗೆ ಗಾಯಗಳಾಗಿವೆ.

ಪೊಲೀಸ್ ದೂರು ದಾಖಲು

ಹಲ್ಲೆ, ಗಲಾಟೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸ್ತಿದ್ದಾರೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆಯಲ್ಲಿ ಗಾಯಗೊಂಡಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಗಲಾಟೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ಸಂಸದ ಪ್ರತಾಪ್​ ಸಿಂಹ ಟ್ವೀಟ್,​ ಬಳಿಕ ಡಿಲೀಟ್​!

ಇನ್ನು ಘಟನೆ ಕುರಿತ ವಿಡಿಯೋವನ್ನು ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದ ಸಂಸದ ಪ್ರತಾಪ್​ ಸಿಂಹ ಅವರು, ಈ ಘಟನೆ ನಡೆದಿರುವುದು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ. ಈ ಘಟನೆಯ ವಿಚಾರ ನಗರ ಪೊಲೀಸ್ ಆಯುಕ್ತ ದಯಾನಂದರ ಗಮನಕ್ಕೂ ತಂದಿದ್ದೇನೆ. “wakeup Hindus” ಎಂದು ಬರೆದುಕೊಂಡಿದ್ದರು. ಆದರೆ ಕೆಲ ಸಮಯದ ಬಳಿಕ ಪ್ರತಾಪ್​ ಸಿಂಹ ಅವರು ತಮ್ಮ ಪೋಸ್ಟ್​ ಅನ್ನು ಡಿಲೀಟ್ ಮಾಡಿದ್ದಾರೆ.

ಕೋಮು ಗಲಭೆ ಅಲ್ಲ

ಮತ್ತೊಂದೆಡೆ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದು, ಹಲ್ಲೆಗೊಳಗಾದವರು ಹಾಗೂ ಹಲ್ಲೆ ಮಾಡಿದ್ದಾರೆ ಎನ್ನಲಾದ ಸೈಯಿದ್ ತಾಹ ಅಕ್ಕಪಕ್ಕದ ಮನೆಯವರು. ಎರಡು ಕುಟುಂಬಗಳು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಈವರೆಗಿನ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡು ಬಂದಿಲ್ಲ. ಘಟನೆ ನಡೆದ ಸ್ಥಳದ ಸ್ವಲ್ಪ ದೂರದಲ್ಲೇ ಮಸೀದಿ ಇದೆ. ಹೀಗಾಗಿ ನಮಾಜ್ ಗೆಂದು ಬಂದವರು ಸಹ ಗಲಾಟೆ ವೇಳೆ ಅಲ್ಲಿ ಸೇರಿದ್ದರು. ಆ ಬಗ್ಗೆ ಸಹ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT