ಕರಡಿ ಸಂಗಣ್ಣ  
ರಾಜ್ಯ

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ ಸಂಗಣ್ಣ ಕರಡಿ; ಬಿಜೆಪಿ ವಿರುದ್ಧ ಅಸಮಾಧಾನ

ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಹಾಲಿ ಸಂಸದ ಕರಡಿ ಸಂಗಣ್ಣ ಸೋಮವಾರ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ವಂಚಿತರಿಂದ ಜಿಗಿಜಿಗಿತ ಆರಂಭವಾಗಿದೆ. ರಾಜ್ಯ ಬಿಜೆಪಿಯಲ್ಲಿಯೂ ಬಂಡಾಯ ಮುಂದುವರಿದಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಹಾಲಿ ಸಂಸದ ಕರಡಿ ಸಂಗಣ್ಣ ಸೋಮವಾರ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಹ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಂಸದ ಸಂಗಣ್ಣ ಕರಡಿ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಈ ನಡುವೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ ನಡೆಸಿದ್ದಾರೆ ಎನ್ನಲಾಗಿದೆ. ಆಗ ತಮಗೆ ಟಿಕೆಟ್‌ ಕೈತಪ್ಪಿದ್ದರ ಬಗ್ಗೆಯೂ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಎಚ್‌ಡಿಕೆ, ಯಾವುದೇ ಆತುರದ ನಿರ್ಧಾರವನ್ನು ಕೈಗೊಳ್ಳದಂತೆ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಸಂಸದ ಸಂಗಣ್ಣ ಕರಡಿ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಬಲಿಗರ ಸಭೆ ಕರೆದಿದ್ದಾರೆ. ಇಲ್ಲಿ ಬಿಜೆಪಿಯಲ್ಲಿಯೇ ಇರುವ ಇಲ್ಲವೇ ಅಥವಾ ಕಾಂಗ್ರೆಸ್ ಸೇರ್ಪಡೆಯಾದರೆ ಅಲ್ಲಿನ ಸ್ಥಾನಮಾನ ಏನು ಎಂಬ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ.

ಸಂಗಣ್ಣ ಕರಡಿ ಅವರಿಗೆ ಈಗ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಚಿಂತೆ ಎದುರಾಗಿದೆ ಎಂದು ಹೇಳಲಾಗಿದೆ. ಕಾರಣ, ಅವರಿಗೆ ಈಗ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಆದರೆ, ಮುಂದೇನು? ಎಂಬ ಬಗ್ಗೆ ರಾಜ್ಯ ನಾಯಕರಾಗಲೀ, ಹೈಕಮಾಂಡ್‌ ನಾಯಕರಾಗಲೀ ಏನೂ ಹೇಳಿಲ್ಲ ಎಂದು ಹೇಳಲಾಗಿದೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವ ಬಗ್ಗೆಯೂ ಅವರಿಗೆ ಯಾವುದೇ ಭರವಸೆ ಸಿಕ್ಕಿಲ್ಲವೇ? ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಕರೆದಿರುವ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಿದ್ದಾರೆ.

ಒಂದು ವೇಳೆ ಕಾಂಗ್ರೆಸ್‌ ಸೇರುವುದಾದರೆ ತಮಗೆ ಸೇರಿದಂತೆ ತಮ್ಮ ಬೆಂಬಲಿಗರಿಗೆ ಯಾವ ರೀತಿ ಸ್ಥಾನಮಾನವನ್ನು ಕಲ್ಪಿಸಲಾಗುತ್ತದೆ? ಮುಂದಿನ ರಾಜಕೀಯ ಗುರಿ ಏನು? ಎಂಬಿತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. ಹೀಗಾಗಿ ಈ ಬಗ್ಗೆ ಕಾಂಗ್ರೆಸ್‌ ನಾಯಕರ ಬಳಿ ಒಂದು ಸಾರಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆಯೂ ಸಂಗಣ್ಣ ಕರಡಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT