ಹೊರನಾಡು ಕ್ಷೇತ್ರದಲ್ಲಿ ಯಡಿಯೂರಪ್ಪ ಕುಟುಂಬ 
ರಾಜ್ಯ

ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಯಡಿಯೂರಪ್ಪ ಕುಟುಂಬ ನವ ಚಂಡಿಕಾ ಯಾಗ!

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಹೊಣೆ ಹೊತ್ತಿರುವ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಚಂಡಿಕಾ ದೇವಿ ಹೋಮ ನಡೆಸಿದರು.

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕುಟುಂಬ ಸದಸ್ಯರೊಂದಿಗೆ ನವ ಚಂಡಿಕಾ ಹೋಮ ನಡೆಸಿದರು. ಯಡಿಯೂರಪ್ಪ ಅವರ ಪುತ್ರಿಯರು ಸಹ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೊಂಡಿದ್ದರು.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಹೊಣೆ ಹೊತ್ತಿರುವ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಚಂಡಿಕಾ ದೇವಿ ಹೋಮ ನಡೆಸಿದರು. ನವ ಚಂಡಿಕಾ ಪಾರಾಯಣ ಹೋಮವನ್ನು ಮಾಡುವುದರಿಂದ ಪುಣ್ಯ ಬರುತ್ತದೆ, ಅಡೆತಡೆಗಳು ನಿವಾರಣೆಯಾಗುತ್ತದೆ ಮತ್ತು ಇಷ್ಟಾರ್ಥಗಳು ಈಡೇರುತ್ತವೆ ಎಂದು ಭಕ್ತರು ನಂಬುತ್ತಾರೆ.

ಹೋಮದ ನಂತರ ಮಾತನಾಡಿದ ಯಡಿಯೂರಪ್ಪ, ರಾಜ್ಯದಾದ್ಯಂತ ಸಾಕಷ್ಟು ಮಳೆ ಮತ್ತು ಸಮೃದ್ಧ ಫಸಲಿಗಾಗಿ ಇದನ್ನು ನಡೆಸಲಾಗಿದೆ. ಈ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರವನ್ನು ಉಳಿಸಿಕೊಳ್ಳಲು. ದೇವಿ ಹಾಗೂ ಜನತೆಯ ಆಶೀರ್ವಾದದಿಂದ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ಮೋದಿಗೆ ಇನ್ನಷ್ಟು ಶಕ್ತಿ ನೀಡಲೆಂದು ದೇವಿಯನ್ನು ಪ್ರಾರ್ಥಿಸಲು ಈ ಹೋಮ ನಡೆಸಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅವರ ಕೈಗಳನ್ನು ಬಲಪಡಿಸಲು ನಾವು ಬಯಸುತ್ತೇವೆ. ಹಾಗಾಗಿ ನಾವು ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಅವರು ಹೇಳಿದರು.

ತುರ್ತು ನಿಧಿ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ, ಸಿಎಂ ಮತ್ತು ಸರಕಾರ ಇದೀಗ ಕೆಟ್ಟ ಕಾಲವನ್ನು ಎದುರಿಸುತ್ತಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಸಿಎಂ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮೂಲಕ ನಾಟಕವಾಡಿದ್ದಾರೆ. ಇದು ಸಿಎಂ ಸ್ಥಾನಮಾನಕ್ಕೆ ಹೊಂದುವುದಿಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT