ವಾಟರ್ ಟ್ಯಾಂಕರ್ ನಲ್ಲಿ ನೀರು ಸರಬರಾಜು (ಸಾಂಕೇತಿಕ ಚಿತ್ರ) 
ರಾಜ್ಯ

ಅನ್ಯ ಬಳಕೆಗೆ ಕುಡಿಯುವ ನೀರು: ನಿವಾಸಿಗಳಿಗೆ BWSSB 1.1 ಲಕ್ಷ ರೂಪಾಯಿ ದಂಡ!

ಕುಡಿಯುವ ನೀರನ್ನು ಅನ್ಯ ಬಳಕೆಗೆ ಬಳಸಿದ್ದಕ್ಕಾಗಿ ಅಪಾರ್ಟ್ ಮೆಂಟ್ ಸಂಕೀರ್ಣಗಳಿಗೆ ಹಾಗೂ ನಿವಾಸಿಗಳಿಗೆ ಬಿಡಬ್ಲ್ಯುಎಸ್ಎಸ್ ಬಿ 1,10,000 ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಬಳಕೆಗೆ ಬಳಸಿದ್ದಕ್ಕಾಗಿ ಅಪಾರ್ಟ್ ಮೆಂಟ್ ಸಂಕೀರ್ಣಗಳಿಗೆ ಹಾಗೂ ನಿವಾಸಿಗಳಿಗೆ ಬಿಡಬ್ಲ್ಯುಎಸ್ಎಸ್ ಬಿ 1,10,000 ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಬೇಕಿರುವವರು ಕುಡಿಯುವ ನೀರನ್ನು ವಾಹನ ಸ್ವಚ್ಛಗೊಳಿಸುವುದು ಹಾಗೂ ರಸ್ತೆಗಳನ್ನು ಸ್ವಚ್ಛಗೊಳಿಸುವುದಕ್ಕಾಗಿ ಬಳಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬಿಡಬ್ಲ್ಯುಎಸ್ಎಸ್ ಬಿ ಇಂಜಿನಿಯರ್ ಗಳ ಮಾಹಿತಿಯ ಪ್ರಕಾರ, ಸಾಮಾಜಿಕ ಜಾಲತಾಣದಲ್ಲಿನ ಅಲರ್ಟ್ ಹಾಗೂ ಮಾಹಿತಿ ಪಡೆದು ತಪಾಸಣೆ ನಡೆಸಿದಾಗ ಬೆಂಗಳೂರಿನ ಹಲವೆಡೆ ನಿವಾಸಿಗಳು ನೀರನ್ನು ವ್ಯರ್ಥ ಮಾಡುತ್ತಿರುವುದು ಕಂಡುಬಂದಿದೆ.

ಬಿಡಬ್ಲ್ಯುಎಸ್ಎಸ್ ಬಿ ಅಧಿಕಾರಿಗಳು ಕುಡಿಯುವ ನೀರಿಗೆ ಹೊರತುಪಡಿಸಿ ಅನ್ಯ ಉದ್ದೇಶಗಳಿಗಾಗಿ ನೀರನ್ನು ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಆದರೂ ಬೆಂಗಳೂರಿನ ಆಗ್ನೇಯ, ನೈಋತ್ಯ, ಉತ್ತರ ಮತ್ತು ಪೂರ್ವ ವಲಯಗಳಲ್ಲಿ ಈ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ.

‘‘ಕಳೆದ ಶುಕ್ರವಾರ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದ್ದು, ಭಾನುವಾರದವರೆಗೆ ಮೂರು ದಿನಗಳಲ್ಲಿ 22 ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ. ರಶೀದಿ ನೀಡಿ ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗಿದೆ. ಆಗ್ನೇಯ ವಿಭಾಗದಲ್ಲಿ 65 ಸಾವಿರ ದಂಡ ವಿಧಿಸಲಾಗಿದ್ದು, ಅದೇ ರೀತಿ ಉತ್ತರದಲ್ಲೂ ವಿಭಾಗದಲ್ಲಿ ರೂ.15,000, ಪೂರ್ವ, 15,000 ಮತ್ತು ನೈಋತ್ಯದಲ್ಲಿ ರೂ.15,000 ದಂಡವನ್ನು ವಿಧಿಸಲಾಗಿದೆ ಮತ್ತು ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಕುಡಿಯುವ ನೀರನ್ನು ವ್ಯರ್ಥ ಮಾಡದಂತೆ ಕೇಳಲಾಯಿತು,'' ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಾಹನಗಳನ್ನು ಸ್ವಚ್ಛಗೊಳಿಸಲು, ತೋಟಗಾರಿಕೆ, ಕಟ್ಟಡ ನಿರ್ಮಾಣ, ಚಾಲನೆಯಲ್ಲಿರುವ ಕಾರಂಜಿಗಳು ಮತ್ತು ಮನರಂಜನಾ ಉದ್ದೇಶಗಳಿಗಾಗಿ ನಗರದಲ್ಲಿ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು BWSSB ಆದೇಶಿಸಿದೆ. ಚಲನಚಿತ್ರ ಮಂದಿರಗಳು ಮತ್ತು ಮಾಲ್‌ಗಳಲ್ಲಿ ಕುಡಿಯುವ ನೀರು ಮತ್ತು ರಸ್ತೆ ನಿರ್ಮಾಣಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ ಮತ್ತು ಅಂತಹ ಉದ್ದೇಶಗಳಿಗೆ ಮರುಬಳಕೆಯ ನೀರನ್ನು ಮಾತ್ರ ಬಳಸಬೇಕೆಂದು ಮಂಡಳಿಯು ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT