ಚುನಾವಣಾ ಆಯೋಗ  
ರಾಜ್ಯ

ದೇವೇಗೌಡ ದೂರಿನ ಮೇಲೆ ಡಿ.ಕೆ.ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಆದೇಶ

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡಲು ಯೋಜನೆ ರೂಪಿಸುತ್ತಿದ್ದಾರೆ ಮತ್ತು ರಾಜ್ಯ ಚುನಾವಣಾ ಆಯೋಗ ಕೈಗೊಳ್ಳಲು ವಿಫಲವಾಗಿದೆ.

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡಲು ಯೋಜನೆ ರೂಪಿಸುತ್ತಿದ್ದಾರೆ ಮತ್ತು ರಾಜ್ಯ ಚುನಾವಣಾ ಆಯೋಗ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಸಲ್ಲಿಸಿದ ದೂರಿನ ಕುರಿತು 'ತಕ್ಷಣ ಸೂಕ್ತ ಕ್ರಮ' ತೆಗೆದುಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿದೆ.

ಈ ಸಂಬಂಧ ರಾಜ್ಯ ಸಿಇಒಗೆ ಬರೆದ ಪತ್ರದಲ್ಲಿ, ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವಂತೆ ಇಸಿ ಚೂಚಿಸಿದೆ ಮತ್ತು ಆದಷ್ಟು ಬೇಗ ಈ ಕುರಿತು ವರದಿ ನೀಡುವಂತೆ ಕೋರಿದೆ.

ಮಾಜಿ ಪ್ರಧಾನಿ ದೇವೇಗೌಡರು ಚುನಾವಣಾ ಸಮಿತಿಗೆ ನೀಡಿದ ದೂರಿನ ಆಧಾರದ ಮೇಲೆ ಮಾರ್ಚ್ 21 ರಂದು ಇಸಿ ಪತ್ರ ಬರೆದಿದೆ.

ಬೆಂಗಳೂರು(ಗ್ರಾಮೀಣ) ಲೋಕಸಭಾ ಕ್ಷೇತ್ರದಲ್ಲಿ 'ಭ್ರಷ್ಟ ಚಟುವಟಿಕೆಗಳನ್ನು' ತಡೆಯಲು ರಾಜ್ಯ ಚುನಾವಣಾ ಯಂತ್ರ ಕ್ಷಿಪ್ರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ನಾಯಕ ಆರೋಪಿಸಿದ್ದಾರೆ.

‘‘ಸಂಬಂಧಿಸಿದ ಅಧಿಕಾರಿಯಿಂದ ಕರ್ತವ್ಯಲೋಪ ಮಾತ್ರವಲ್ಲದೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರರಾಗಿರುವ ಹಾಲಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹೆದರುತ್ತಿದ್ದಾರೆ’’ ಎಂದು ದೇವೇಗೌಡರು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT