ವೃದ್ದ ದಂಪತಿ ಸುದ್ದಿಗೋಷ್ಠಿ TNIE
ರಾಜ್ಯ

ಮಂಗಳೂರು: ವಯೋವೃದ್ದ ದಂಪತಿ ಮೇಲೆ ಚರ್ಚ್ ಪಾದ್ರಿ ದೌರ್ಜನ್ಯ, ದಂಪತಿಯನ್ನೇ ಬಹಿಷ್ಕರಿಸಿದ ಕ್ರೈಸ್ತ ಸಮುದಾಯ

ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಈ ತಿಂಗಳ ಆರಂಭದಲ್ಲಿ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯದವರು ಬಹಿಷ್ಕರಿಸಿದ್ದಾರೆ.

ಮಂಗಳೂರು: ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಈ ತಿಂಗಳ ಆರಂಭದಲ್ಲಿ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯದವರು ಬಹಿಷ್ಕರಿಸಿದ್ದಾರೆ.

ಚರ್ಚ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ ವಿರುದ್ಧ ದೂರು ನೀಡಿದ ಕೂಡಲೇ ಕಿರುಕುಳ ಆರಂಭವಾಯಿತು ಎಂದು ದಂಪತಿ ಗ್ರೆಗೊರಿ ಮೊಂಥೆರೊ ಮತ್ತು ಫಿಲೋಮಿನಾ ಕೊಯೆಲೊ ಇಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಮೊದಲಿಗೆ, ಚರ್ಚ್‌ಗೆ ಸಂಪರ್ಕ ಹೊಂದಿದ ಎಲ್ಲಾ ವಾಟ್ಸಾಪ್ ಗುಂಪುಗಳಿಂದ ನಮ್ಮನ್ನು ತೆಗೆದುಹಾಕಲಾಯಿತು. ನಂತರ ಹಳ್ಳಿಯ ಸಮುದಾಯದ ಜನರು ಇದ್ದಕ್ಕಿದ್ದಂತೆ ನಮ್ಮೊಂದಿಗೆ ಮಾತನಾಡುವುದನ್ನು ನಿಲ್ಲಿಸಿದರು. ಪ್ರಕರಣವನ್ನು ದುರ್ಬಲಗೊಳಿಸಲು ಮಂಗಳೂರು ಧರ್ಮಪ್ರಾಂತ್ಯವು ಪೊಲೀಸರ ಮೇಲೆ ಒತ್ತಡ ಹೇರುವ ಮೂಲಕ ಆರೋಪಿ ಪಾದ್ರಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಏತನ್ಮಧ್ಯೆ, ಪಾದ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ದಂಪತಿಗೆ ಸಹಾಯ ಮಾಡಿದ ಸಾಮಾಜಿಕ ಕಾರ್ಯಕರ್ತರಾದ ರಾಬರ್ಟ್ ರೊಸಾರಿಯೊ ಮತ್ತು ಮಾರಿಸ್ ಮಸ್ಕರೇನ್ಹಸ್ ಅವರು ದಂಪತಿಗಳಿಗೆ ಸಹಾಯ ಮಾಡಿದ್ದಕ್ಕಾಗಿ ಟಾರ್ಗೆಟ್ ಆಗಿದ್ದಾರೆ ಎಂದು ಹೇಳಿದರು. ಮಂಗಳೂರಿನಾದ್ಯಂತ ನಮ್ಮನ್ನು ಕ್ರೈಸ್ತ ವಿರೋಧಿಗಳೆಂದು ಬಿಂಬಿಸಿ ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಲು ಪ್ರಚೋದನೆ ನೀಡಲಾಗುತ್ತಿದೆ. ಆದರೆ ಸಮುದಾಯದ ಜನರಲ್ಲಿ ಜಾಗೃತಿ ಹೆಚ್ಚಿರುವುದರಿಂದ ಈವರೆಗೆ ಯಾವುದೇ ಕ್ರೈಸ್ತರು ಒತ್ತಡಕ್ಕೆ ಮಣಿದಿಲ್ಲ ಎಂದರು.

ದಂಪತಿಗೆ ಸಹಾಯ ಮಾಡಿದ್ದಕ್ಕಾಗಿ ಪುತ್ತೂರು ಚರ್ಚ್‌ನ ಪ್ಯಾರಿಷ್ ಕೌನ್ಸಿಲ್‌ನಿಂದ ನನ್ನನ್ನು ತೆಗೆದುಹಾಕಲಾಗಿದೆ ಎಂದು ಮಾರಿಸ್ ಮಸ್ಕರೇನ್ಹಸ್ ಹೇಳಿದ್ದಾರೆ. ಬಿಷಪ್ ರೆವ್ ಪೀಟರ್ ಪಾಲ್ ಸಲ್ಡಾನ್ಹಾ ಅವರಿಗೆ ಪತ್ರ ಬರೆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ ಅವರು, ಬಿಷಪ್ ಅವರು ಪ್ಯಾರಿಷ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದರು.

ಮಂಗಳೂರು ಧರ್ಮಾಲಯಗಳು ಸಂಕಷ್ಟದಲ್ಲಿರುವ ವೃದ್ಧ ದಂಪತಿಗಳಿಗೆ ನೆರವು ನೀಡದಿರುವುದನ್ನು ರೊಸಾರಿಯೋ ಖಂಡಿಸಿದರು. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಸಾರ್ವಜನಿಕರಿಂದ ತೀವ್ರ ಟೀಕೆಗೆ ಕಾರಣವಾಯಿತು. ಆದರೆ ಸಂತ್ರಸ್ತರನ್ನು ಭೇಟಿ ಮಾಡಲು ಬಿಷಪ್ ತಲೆಕೆಡಿಸಿಕೊಂಡಿಲ್ಲ, ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಯಾರನ್ನೂ ಕಳುಹಿಸಲಿಲ್ಲ. ಘಟನೆಗೆ ಸಂಬಂಧಿಸಿದಂತೆ ನನ್ನ ಪತ್ರಕ್ಕೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಮಾರಿಸ್ ಮಸ್ಕರೇನ್ಹಸ್ ಆರೋಪಿಸಿದರು.

ಘಟನೆ ನಡೆದ ಕೆಲವು ದಿನಗಳ ನಂತರ ಮಂಗಳೂರು ಕ್ಯಾಥೋಲಿಕ್ ಸಭಾದ ಸದಸ್ಯರೊಬ್ಬರೊಂದಿಗೆ ಮಂಗಳೂರು ಧರ್ಮಾಲಯದ ಪಿಆರ್‌ಒ ರಾಯ್ ಕ್ಯಾಸ್ತಲಿನೊ ಅವರ ಮನೆಗೆ ಭೇಟಿ ನೀಡಿ ಅವರ ಗುರುತು ರಹಸ್ಯವಾಗಿಟ್ಟಿದ್ದರು ಎಂದು ಗ್ರೆಗೊರಿ ಹೇಳಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಅವರು ನಮ್ಮ ವಿರುದ್ಧವಾಗಿ ಏನೂ ಸಿಗದಿದ್ದಾಗ ಅವರು ಸದ್ದಿಲ್ಲದೆ ಹೊರಟರು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT