ಸಂಗ್ರಹ ಚಿತ್ರ
ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ಜಲಸಮಾಧಿ

Vishwanath S

ಮಂಡ್ಯ: ಕಾವೇರಿಯಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ಮುಳುಗಿ ಮೃತಪಟ್ಟವರನ್ನು ಮೈಸೂರು ಮೂಲದ 40 ವರ್ಷದ ನಾಗೇಶ್, 17 ವರ್ಷದ ಭರತ್, 32 ವರ್ಷದ ಗುರು ಮತ್ತು 16 ವರ್ಷದ ಮಹದೇವ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.

ಮೈಸೂರಿನಿಂದ ಮಂಡ್ಯದ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ 40 ಜನರ ತಂಡ ಒಂದೇ ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಾಡಲು ಹೋಗಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಮುಂದಾದ ಮೂವರು ನೀರಿನಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ.

SCROLL FOR NEXT