ಡಿಕೆ.ಶಿವಕುಮಾರ್ 
ರಾಜ್ಯ

ಮೇಕೆದಾಟು ಯೋಜನೆ: ಮಾಜಿ ಪ್ರಧಾನಿ ದೇವೇಗೌಡ ನಡೆ ಸ್ವಾಗತಿಸಿದ DK ಶಿವಕುಮಾರ್

ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.

ಬೆಂಗಳೂರು: ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.

ದೇವೇಗೌಡ ಅವರ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ ನಮ್ಮ ನೀರು, ನಮ್ಮ ಹಕ್ಕು ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಈಗ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನಾದರೂ ಮನಗಂಡು ಕೇಂದ್ರ ಸರಕಾರ ಮೇಕೆದಾಟು ಆಣೆಕಟ್ಟು ಯೋಜನೆಗೆ ಅನುಮತಿ ನೀಡುತ್ತದೆ ಎಂಬ ವಿಶ್ವಾಸ ನನ್ನದು. ಈ ಎಲ್ಲ ಸಮಸ್ಯೆಗಳನ್ನು ನಿರೀಕ್ಷೆ ಮಾಡಿಯೇ ಕಾಂಗ್ರೆಸ್‌ ಪಕ್ಷವು ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆ ಮಾಡಿತ್ತು. ಆ ಮೂಲಕ ನಮ್ಮ ಹಕ್ಕೊತ್ತಾಯವನ್ನು ಕನ್ನಡಿಗರ ಮನೆ-ಮನಗಳಿಗೆ ತಲುಪಿಸಿತ್ತು" ಎಂದು ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಮೇಕೆದಾಟು ಯೋಜನೆ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ದೇವೇಗೌಡ ಅವರು, ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯ. ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಕಾಂಗ್ರೆಸ್‌, ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಈ ವಿಚಾರದಲ್ಲಿ ಒಟ್ಟಿಗೆ ಹೆಜ್ಜೆಯಿಡಬೇಕು ಎಂದು ಸಲಹೆ ನೀಡಿದ್ದರು.

ಮೇಕೆದಾಟು ಯೋಜನೆ ವಿರೋಧಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನಿಲುವು ಖಂಡನೀಯ. ಈ ಯೋಜನೆ ಅನುಷ್ಠಾನ ಸಂಬಂಧ ಜೆಡಿಎಸ್‌ ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಿದೆ. ಕಾಂಗ್ರೆಸ್‌, ಬಿಜೆಪಿ ಕೂಡ ಬದ್ಧತೆ ಪ್ರದರ್ಶಿಸಲಿ. ಪ್ರಧಾನಿಯವರೂ ಮಧ್ಯಸ್ಥಿಕೆ ವಹಿಸಲಿ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT