ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಕಾರಿನಲ್ಲಿ ಮೂವರನ್ನು ಸುಟ್ಟಿದ್ದ ಪ್ರಕರಣ; ನಿಧಿ ವಿಚಾರವಾಗಿ ಹತ್ಯೆ, ಇಬ್ಬರ ಬಂಧನ

ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮೂವರ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ತುಮಕೂರು: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮೂವರ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ಪ್ರಮುಖ ಆರೋಪಿ ಇಲ್ಲಿನ ಸಿರಾ ಗೇಟ್‌ನ ಸ್ವಯಂ ಘೋಷಿತ ಅರ್ಚಕ ರಾಜು ಅಲಿಯಾಸ್ ರಾಜಗುರು ಕುಮಾರ್ ಅಲಿಯಾಸ್ ಪಾತರಾಜು (35) ಮತ್ತು ಸತ್ಯಮಂಗಲದ ಗಂಗರಾಜು (35) ಎಂಬುವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಎಸ್‌ಡಿಪಿಐ ಸದಸ್ಯ ಸಾಹುಲ್ (45), ಇಸಾಕ್ (56) ಮತ್ತು ಸಿದ್ದಿಕ್ (34) ಫೆಬ್ರವರಿ 22 ರಂದು ಹತ್ಯೆಗೀಡಾಗಿದ್ದರು.

ಜಮೀನೊಂದರಲ್ಲಿ ಸಿಕ್ಕ ಚಿನ್ನದ ಒಡವೆ ನೀಡುವುದಾಗಿ ಭರವಸೆ ನೀಡಿ ಸಂತ್ರಸ್ತರಿಂದ 6 ಲಕ್ಷ ರೂ.ಗಳನ್ನು ಪಾತರಾಜು ಪಡೆದಿದ್ದರು. ಅವರು ನೀಡಿದ ಭರವಸೆಯನ್ನು ಈಡೇರಿಸದಿದ್ದಾಗ, ಸಂತ್ರಸ್ತರು ತಮ್ಮ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದರು.

ಗಂಗರಾಜು ಮೂಲಕ ಅರ್ಚಕರು ಸಂತ್ರಸ್ತರನ್ನು ಕೊಲ್ಲಲು ಆರು ಮಂದಿಯನ್ನು ನೇಮಿಸಿಕೊಂಡಿದ್ದರು. ಶವಗಳನ್ನು ಕಾರಿನೊಳಗೆ ತುಂಬಿ ಕೂಚಂಗಿ ಕೆರೆ ಬಳಿ ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT