ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಕಾರಿನಲ್ಲಿ ಮೂವರನ್ನು ಸುಟ್ಟಿದ್ದ ಪ್ರಕರಣ; ನಿಧಿ ವಿಚಾರವಾಗಿ ಹತ್ಯೆ, ಇಬ್ಬರ ಬಂಧನ

ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮೂವರ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ತುಮಕೂರು: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಮೂವರ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ಪ್ರಮುಖ ಆರೋಪಿ ಇಲ್ಲಿನ ಸಿರಾ ಗೇಟ್‌ನ ಸ್ವಯಂ ಘೋಷಿತ ಅರ್ಚಕ ರಾಜು ಅಲಿಯಾಸ್ ರಾಜಗುರು ಕುಮಾರ್ ಅಲಿಯಾಸ್ ಪಾತರಾಜು (35) ಮತ್ತು ಸತ್ಯಮಂಗಲದ ಗಂಗರಾಜು (35) ಎಂಬುವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಎಸ್‌ಡಿಪಿಐ ಸದಸ್ಯ ಸಾಹುಲ್ (45), ಇಸಾಕ್ (56) ಮತ್ತು ಸಿದ್ದಿಕ್ (34) ಫೆಬ್ರವರಿ 22 ರಂದು ಹತ್ಯೆಗೀಡಾಗಿದ್ದರು.

ಜಮೀನೊಂದರಲ್ಲಿ ಸಿಕ್ಕ ಚಿನ್ನದ ಒಡವೆ ನೀಡುವುದಾಗಿ ಭರವಸೆ ನೀಡಿ ಸಂತ್ರಸ್ತರಿಂದ 6 ಲಕ್ಷ ರೂ.ಗಳನ್ನು ಪಾತರಾಜು ಪಡೆದಿದ್ದರು. ಅವರು ನೀಡಿದ ಭರವಸೆಯನ್ನು ಈಡೇರಿಸದಿದ್ದಾಗ, ಸಂತ್ರಸ್ತರು ತಮ್ಮ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದರು.

ಗಂಗರಾಜು ಮೂಲಕ ಅರ್ಚಕರು ಸಂತ್ರಸ್ತರನ್ನು ಕೊಲ್ಲಲು ಆರು ಮಂದಿಯನ್ನು ನೇಮಿಸಿಕೊಂಡಿದ್ದರು. ಶವಗಳನ್ನು ಕಾರಿನೊಳಗೆ ತುಂಬಿ ಕೂಚಂಗಿ ಕೆರೆ ಬಳಿ ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!