ನಾರಾಯಣಸ್ವಾಮಿ-ಗೋವಿಂದ ಕಾರಜೋಳ PTI
ರಾಜ್ಯ

ಚಿತ್ರದುರ್ಗ ಬಿಜೆಪಿ ಟಿಕೆಟ್ ಘೋಷಣೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಹೋರಾಟ ವ್ಯರ್ಥ, ಗೋವಿಂದ ಕಾರಜೋಳ ಕಣಕ್ಕೆ!

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರ ಬದಲಿಗೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಬೆಂಗಳೂರು: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರ ಬದಲಿಗೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿರುವ ನಾರಾಯಣಸ್ವಾಮಿ ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಹೀಗಾಗಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಪಕ್ಷದ ಮೂಲಗಳ ತಿಳಿಸಿವೆ.

ಚಿತ್ರದುರ್ಗ ಮೂಲದವರಲ್ಲದ ನಾರಾಯಣಸ್ವಾಮಿ ಈ ಹಿಂದೆ ಬೆಂಗಳೂರು ಸಮೀಪದ ಆನೇಕಲ್‌ನಿಂದ ಶಾಸಕರಾಗಿದ್ದರು.ಇನ್ನು ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ ತಾನು ಸ್ಪರ್ಧಿಸಲಿರುವ ಎಲ್ಲಾ 25 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ.ಉಳಿದ ಮೂರು ಸ್ಥಾನಗಳಾದ ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಎನ್‌ಡಿಎ ಮೈತ್ರಿಕೂಟ ಪಕ್ಷವಾದ ಜೆಡಿಎಸ್ ಸ್ಪರ್ಧಿಸಲಿದೆ.

ವಿಜಯಪುರ ಜಿಲ್ಲೆಯವರಾದ ಕಾರಜೋಳ ಅವರು ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಿಂದ ಐದು ಬಾರಿ ಗೆಲುವು ಸಾಧಿಸಿದ್ದರು. 73 ವರ್ಷದ ಅವರು ಬಿಜೆಪಿ ಸರ್ಕಾರಗಳಲ್ಲಿ ವಿವಿಧ ಖಾತೆಗಳ ಸಚಿವರಾಗಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಮುಧೋಳದಿಂದ ಕಾರಜೋಳ ಅವುರ ಸೋಲು ಅನುಭವಿಸಿದ್ದರು. ಅವರ ವಿರುದ್ಧ ಆರ್ ಬಿ ತಿಮ್ಮಾಪುರ ಗೆಲುವು ಸಾಧಿಸಿದ್ದರು.

2019ರಲ್ಲಿ ನಾರಾಯಣಸ್ವಾಮಿ ವಿರುದ್ಧ ಸೋತಿದ್ದ ಬಿ ಎನ್ ಚಂದ್ರಪ್ಪ ಅವರನ್ನೇ ಮತ್ತೆ ಕಾಂಗ್ರೆಸ್ ಚಿತ್ರದುರ್ಗದಿಂದ ಕಣಕ್ಕಿಳಿಸಿದೆ. ಚಂದ್ರಪ್ಪ 2014ರಲ್ಲಿ ಚಿತ್ರದುರ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT