ಹೇಮಂತ್ ನಿಂಬಾಳ್ಕರ್ 
ರಾಜ್ಯ

ಪತ್ನಿ ಅಂಜಲಿ ನಿಂಬಾಳ್ಕರ್‌ಗೆ ಕಾಂಗ್ರೆಸ್‌ ಟಿಕೆಟ್‌; ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್‌ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್‌ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಹೇಮಂತ್ ನಿಂಬಾಳ್ಕರ್ ಅವರು ಸದ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಬಿಜೆಪಿ ತಿಳಿಸಿದೆ.

ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಸದ್ಯ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಶಾಸಕಿಯಾಗಿದ್ದಾರೆ.

'ಹೇಮಂತ್ ಅವರು ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಚುನಾವಣೆ ದೃಷ್ಟಿಯಿಂದ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಒಲವು ತೋರಲು ಇತರ ಐಪಿಎಸ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಚುನಾವಣಾ ಕಾರ್ಯದಲ್ಲಿರುವ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲ ಸಾಧ್ಯತೆಗಳಿವೆ. ಅವರು ಅದೇ ಹುದ್ದೆಯಲ್ಲಿ ಮುಂದುವರಿದರೆ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳ ಪರವಾಗಿ ತಮ್ಮ ಪ್ರಭಾವವನ್ನು ಬಳಸುತ್ತಾರೆ' ಎಂದು ಬಿಜೆಪಿ ಹೇಳಿದೆ.

ರೌಡಿಶೀಟ್‌ನಲ್ಲಿ ಹೆಸರುಗಳನ್ನು ನಮೂದಿಸುವುದು ಸೇರಿದಂತೆ ಪೊಲೀಸ್ ಇಲಾಖೆಯು ಪ್ರಮುಖ ಅಧಿಕಾರವನ್ನು ಹೊಂದಿದೆ. ನಮ್ಮ ಪಕ್ಷದ 'ಕಾರ್ಯಕರ್ತರಿಗೆ' ಕಿರುಕುಳ ನೀಡಲು ಇದನ್ನು ದುರುಪಯೋಗಪಡಿಸಿಕೊಳ್ಳಬಹುದು, ನಮ್ಮ 'ಕಾರ್ಯಕರ್ತರ' ವಿರುದ್ಧ ಬಹಿಷ್ಕಾರದ ಆದೇಶಗಳನ್ನು ರವಾನಿಸಬಹುದು ಎಂದು ಹೇಳಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾನೂನುಬಾಹಿರ ಕೃತ್ಯಗಳಿಗೆ ಬೆಂಬಲ ನೀಡಲು ಅವರು ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT