ಗುರುಲಿಂಗ ಕಾಪಸೆ 
ರಾಜ್ಯ

ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಗರದ ಸಪ್ತಾಪೂರದ ದುರ್ಗಾ ಕಾಲೊನಿಯ ಅವರ ಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.

1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.

ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದರು. ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು. ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಸೇರಿ ಹಲವು ಕೃತಿಗಳನ್ನು ರಚಿಸಿದ್ದಾರೆ. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡ ಅನುವಾದ ಮಾಡಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕಾಪಸೆಯವರು ದ.ರಾ.ಬೇಂದ್ರೆ, ಮಧುರ ಚೆನ್ನ ಸೇರಿ ಹಲವು ಸಾಹಿತಿಗಳ ಒಡನಾಡಿಯಾಗಿದ್ದರು.

ಕಾಪಸೆಯವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ ಶಿಕ್ಷಕರಾಗಿ ಸೇವೆ ಆರಂಭ ಮಾಡಿದ ಕಾಪಸೆ ಕಾಲಾಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT