ಆಟೋ ಚಾಲಕನ ಮೇಲೆ ಯುವತಿ ಮತ್ತು ಆಕೆಯ ಗೆಳೆಯನ ಹಲ್ಲೆ  
ರಾಜ್ಯ

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನ ಮೇಲೆ ಯುವತಿ ಹಲ್ಲೆ, ರಂಪಾಟ!

ನಗರ ಜೀವನಶೈಲಿ ಅನುಕರಣೆ, ಆಧುನಿಕತೆಗೆ ಮಾರುಹೋಗಿ ಯುವತಿಯರು ಮದ್ಯಪಾನ, ಡ್ರಗ್ಸ್ ಚಟಗಳಿಗೆ ಬಲಿಯಾಗುತ್ತಿರುವುದು ಸಾಮಾನ್ಯವಾಗಿದೆ. ಯುವತಿಯರು ಮದ್ಯಪಾನ ಮಾಡಿ ಸಾರ್ವಜನಿಕವಾಗಿ ಕಿರಿಕ್ ಮಾಡಿಕೊಳ್ಳುವ ಅನೇಕ ಘಟನೆಗಳು ನಡೆಯುತ್ತವೆ.

ಬೆಂಗಳೂರು: ನಗರ ಜೀವನಶೈಲಿ ಅನುಕರಣೆ, ಆಧುನಿಕತೆಗೆ ಮಾರುಹೋಗಿ ಯುವತಿಯರು ಮದ್ಯಪಾನ, ಡ್ರಗ್ಸ್ ಚಟಗಳಿಗೆ ಬಲಿಯಾಗುತ್ತಿರುವುದು ಸಾಮಾನ್ಯವಾಗಿದೆ. ಯುವತಿಯರು ಮದ್ಯಪಾನ ಮಾಡಿ ಸಾರ್ವಜನಿಕವಾಗಿ ಕಿರಿಕ್ ಮಾಡಿಕೊಳ್ಳುವ ಅನೇಕ ಘಟನೆಗಳು ನಡೆಯುತ್ತವೆ.

ಕಳೆದ ರಾತ್ರಿ ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದನ್ನು ಪ್ರಶ್ನೆ ಮಾಡಿದ ಆಟೋ ಚಾಲಕನಿಗೆ ಯುವತಿ ಮತ್ತು ಆಕೆಯ ಜೊತೆಯಲ್ಲಿದ್ದ ಗೆಳೆಯ ಹಲ್ಲೆ ನಡೆಸಿದ ಘಟನೆ ನಡೆದಿದೆ. ಯುವತಿ ಆಟೋ ಚಾಲಕನ ಮೈ-ಕೈ ಪರಚಿ ಗಾಯಗೊಳಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾಳೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಗಿದ್ದೇನು: ಕಳೆದ ತಡರಾತ್ರಿ ಬೆಂಗಳೂರಿನ ಸಂಜಯನಗರ ಹತ್ತಿರ ಕಂಠಪೂರ್ತಿ ಕುಡಿದು ಯುವತಿಯೋರ್ವಳು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದಳು. ಆಟೋ ಚಾಲಕ ನಿಶಾಂತ್ ಎಂಬುವವರು ಅಡ್ಡಾದಿಡ್ಡಿ ವಾಹನ ಚಾಲನೆ ಬಗ್ಗೆ ಪ್ರಶ್ನಿಸಿದಕ್ಕೆ ಯುವತಿ ಹಾಗೂ ಯುವತಿ ಜೊತೆಯಿದ್ದ ಯುವಕ ಇಬ್ಬರೂ ಕಾರು ನಿಲ್ಲಿಸಿ ಕೆಳಗಿಳಿದು ಆಟೋ ಚಾಲಕನ ಜೊತೆ ಗಲಾಟೆಗೆ ಇಳಿದಿದ್ದಾರೆ.

ಯುವತಿ ಮತ್ತು ಆಕೆಯ ಗೆಳಯ ಆಟೋ ಚಾಲಕ ನಿಶಾಂತ್ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT