ರಾಜ್ಯ

ಬೆಂಗಳೂರು: ಹೋಟೆಲ್ ರೂಂನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

Vishwanath S

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕಮ್ಮನಹಳ್ಳಿಯ ಓಯೋ ಹೋಟೆಲ್ ರೂಂನಲ್ಲಿ ಸ್ನೇಹಿತರ ಜೊತೆ ರೌಡಿಶೀಟರ್ ದಿನೇಶ್ ತಂಗಿದ್ದನು. ಆದರೆ ರೂಂನ ಬಿಲ್ ಕೊಡುವ ವಿಚಾರದಲ್ಲಿ ಜಗಳವಾಗಿ ಏಳು ಮಂದಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

SCROLL FOR NEXT