ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಡಿಕೇರಿ: ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರ ಕೈಚಳಕ; ಬಿಜೆಪಿ ನಾಯಕರ ಪರ್ಸ್ ಮಾಯ!

ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದು, ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

ಮಡಿಕೇರಿ: ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದು, ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

20,000 ನಗದು, ಹಲವು ಕಾರ್ಡ್‌ಗಳು ಮತ್ತು ಗುರುತಿನ ಚೀಟಿಗಳನ್ನು ಕಳೆದುಕೊಂಡಿರುವುದಾಗಿ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಗುತ್ತಿಗೆದಾರನಾಗಿರುವ ಮತ್ತೋರ್ವ ಬಿಜೆಪಿ ಕಾರ್ಯಕರ್ತ ಸುಮಾರು 50,000 ರೂಪಾಯಿಗಳನ್ನು ಕಳೆದುಕೊಂಡಿರುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಒಟ್ಟು ಸುಮಾರು 5 ಲಕ್ಷ ರೂಪಾಯಿ ನಗದನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಘಟನೆಗಳ ಹಿಂದೆ ‘ಹೊರಗಿನವರ’ ಕೈವಾಡವಿದೆ ಎಂದು ಅಪ್ಪಚ್ಚು ರಂಜನ್ ಶಂಕಿಸಿದ್ದಾರೆ. ವೇದಿಕೆ ಕಾರ್ಯಕ್ರಮದ ನಂತರ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜನರು ವೇದಿಕೆ ಬಳಿ ಧಾವಿಸಿದಾಗ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT