ಸಾಂದರ್ಭಿಕ ಚಿತ್ರ  
ರಾಜ್ಯ

ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ಐದು ದಿನ ಉಷ್ಣ ಅಲೆ: IMD ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆಯ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆಯ ಎಚ್ಚರಿಕೆಯನ್ನು ನೀಡಿದೆ.

ಉತ್ತರ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಬಹುದು. ಆದರೆ ಉತ್ತರ-ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಅವು 4 ರಿಂದ 5 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗುತ್ತವೆ ಎಂದು IMD ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. ಜನರು ಹಗಲು ಹೊತ್ತಿನಲ್ಲಿ ಸಾಧ್ಯವಾದಷ್ಟು ಮನೆಯೊಳಗೆ ಇರುವಂತೆ ಅವರು ಎಚ್ಚರಿಕೆ ನೀಡಿದ್ದಾರೆ. ಜನರು ಮನೆಯಿಂದ ಹೊರಗೆ ಕಾಲಿಟ್ಟಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ಒಯ್ಯುವಂತೆ ಸಲಹೆ ನೀಡಿದ್ದಾರೆ.

ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಎ ಪ್ರಸಾದ್ TNIEಗೆ ತಿಳಿಸಿದ್ದಾರೆ. IMD ವರದಿ ಪ್ರಕಾರ, ತುಮಕೂರು, ಬಾಗಲಕೋಟೆ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ತಾಪಮಾನವು 3.1- 5 ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯ, ದಾವಣಗೆರೆ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ 1.6- 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಏಪ್ರಿಲ್‌ನಲ್ಲಿ ತಾಪಮಾನವು ಮಾರ್ಚ್‌ಗಿಂತ ಹೆಚ್ಚಾಗಿರುತ್ತದೆ.

ಆದಾಗ್ಯೂ, ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು 1.2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಈಗ, ಆಕಾಶವು ಶುಭ್ರವಾಗಿದ್ದು, ಬೇಸಿಗೆಯ ಬಿಸಿಯು ತೀವ್ರಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT