ಸಂಗ್ರಹ ಚಿತ್ರ 
ರಾಜ್ಯ

ನೇಜಾರು ನಾಲ್ವರು ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಆರೋಪಿ ಹಾಜರುಪಡಿಸುವ ವೇಳೆ ಅಧಿಕಾರಿ ಪಾನಮತ್ತ; ಕ್ರಮಕ್ಕೆ ಸೂಚನೆ

ನೇಜಾರ ನಾಲ್ವರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಅಧಿಕಾರಿಯೊಬ್ಬರು ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸಿದ ಆರೋಪ ಕೇಳಿ ಬಂದಿದೆ.

ಉಡುಪಿ: ನೇಜಾರ ನಾಲ್ವರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಅಧಿಕಾರಿಯೊಬ್ಬರು ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸಿದ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್‌ ಅರುಣ್‌ ಚೌಗುಲೆಯನ್ನು ನ್ಯಾಯಾಲಯಕ್ಕೆ ಕರೆ ತರುವ ಭದ್ರತೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಬೆಂಗಳೂರಿನ ಮೀಸಲು ಪೊಲೀಸ್‌ ವಿಭಾಗದ ಸಬ್‌ ಇನ್‌ಸ್ಪೆಕ್ಟರ್‌ ಕರ್ತವ್ಯದ ವೇಳೆಯಲ್ಲಿ ಮದ್ಯ ಸೇವಿಸಿ ಬಂದಿರುವ ಬಗ್ಗೆ ಆರೋಪ ಕೇಳಿ ಬಂದಿದೆ,

ಅಧಿಕಾರಿಯು ಸಮವಸ್ತ್ರವನ್ನು ಕೂಡ ಸಮರ್ಪಕವಾಗಿ ಧರಿಸದೆ ಇರುವುದು ಹಾಗೂ ಕರ್ತವ್ಯದಲ್ಲಿದ್ದ ವೇಳೆ ಮದ್ಯ ಸೇವನೆ ಮಾಡಿರುವುದು ಹಾಗೂ ಮಾಧ್ಯಮದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಈ ಬಗ್ಗೆ ಸ್ಥಳದಲ್ಲಿದ್ದವರು ಉಡುಪಿ ಎಸ್ಪಿಯ ಗಮನಕ್ಕೆ ತಂದಿದ್ದು, ಶಿಸ್ತು ಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ಉಡುಪಿ ಪೊಲೀಸ್‌ ಅಧೀಕ್ಷಕ ಡಾ. ಕೆ. ಅರುಣ್‌ ಅವರು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಆರೋಪ ನಿರಾಕರಿಸಿದ ಆರೋಪಿ

ಪ್ರಕರಣ ಸಂಬಂಧ ಪ್ರವೀಣ್‌ ಅರುಣ್‌ ಚೌಗುಲೆ (39) ನನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯದ ಮುಂದೆ ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆಂದು ತಿಳಿದುಬಂದಿದೆ.

ಆರೋಪಿ ಮೇಲಿನ ಆಪಾದನೆ ವಾಚಿಸುವ ಪ್ರಕ್ರಿಯೆಗೆ ಮುನ್ನ ಪ್ರವೀಣ್‌ ಚೌಗುಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದ ಆರೋಪಿ ಚೌಗುಲೆಯನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್‌ ವೃತ್ತ ನಿರೀಕ್ಷಕ ಕೃಷ್ಣ ಎಸ್‌. ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಈ ಸಂದರ್ಭ ನ್ಯಾಯಾಧೀಶರಾದ ದಿನೇಶ್‌ ಹೆಗ್ಡೆ ಆರೋಪಿ ಮೇಲಿನ ಅಪಾದನೆಯನ್ನು ವಾಚಿಸಿದರು. ಆಗ ಆರೋಪಿ ಪ್ರವೀಣ್‌ ಅರುಣ್‌ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಏಪ್ರಿಲ್ 5 ರಂದು ಪ್ರಿ ಟ್ರಯಲ್‌ ಕಾನ್ಫರೆನ್ಸ್‌ ನಡೆಸಲು ತೀರ್ಮಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ಕನ್ನಡದ ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!