ವಿಶೇಷ ಚೇತನರ ಬೈಕ್​ ಜಾಥಾ 
ರಾಜ್ಯ

ಮತದಾನ ಜಾಗೃತಿ ಅಭಿಯಾನ: ವಿಶೇಷ ಚೇತನರ ಬೈಕ್​ ಜಾಥಾಗೆ ರಜನೀಶ್ ಗೋಯಲ್ ಚಾಲನೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಜನೀಶ್ ಗೋಯಲ್ ಚಾಲನೆ ನೀಡಿದ್ದಾರೆ.

ಬೆಂಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ ನೀಡಿದ್ದಾರೆ.

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ಮಾಡಲಾಯಿತು. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಮಾಡುವಂತೆ ಉತ್ತೇಜಿಸುವುದು ಈ ಪ್ರಚಾರದ ಉದ್ದೇಶವಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ವಿಶೇಷಚೇತನರು, 85 ವರ್ಷ ಮೇಲ್ಪಟ್ಟವರು ಮತ್ತು ತೃತೀಯಲಿಂಗಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುತ್ತಿದ್ದು, ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು.

ಮತಗಟ್ಟೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮೆರವಣಿಗೆಯ ಅಂಗವಾಗಿ ವಿಧಾನಸೌಧದಲ್ಲಿ ವಿಕಲಚೇತನರಿಂದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ರ್ಯಾಲಿ ನಡೆದು ಕೆ.ಆರ್.ವೃತ್ತ, ನೃಪತುಂಗ ರಸ್ತೆ, ಹಡ್ಸನ್ ಸರ್ಕಲ್ ಸೇರಿದಂತೆ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT