ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ 
ರಾಜ್ಯ

ಬೆಂಗಳೂರು: ವಿವಿಧ ಪಿಜಿ, ಹೋಟೆಲ್ ಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ, ರಾಜಸ್ಥಾನ ಮೂಲದ ಮಹಿಳೆ ಬಂಧನ

ವಿವಿಧ ಪಿಜಿ ಮತ್ತು ಹೋಟೆಲ್‌ಗಳಿಂದ ಲ್ಯಾಪ್‌ಟಾಪ್‌ಗಳನ್ನು ಕದ್ದಿದ್ದಕ್ಕಾಗಿ ರಾಜಸ್ಥಾನ ಮೂಲದ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಬೆಂಗಳೂರಿನ ವಿವಿಧ ಪಿಜಿ ಮತ್ತು ಹೋಟೆಲ್‌ಗಳಿಂದ ಲ್ಯಾಪ್‌ಟಾಪ್‌ಗಳನ್ನು ಕದ್ದಿದ್ದಕ್ಕಾಗಿ ರಾಜಸ್ಥಾನ ಮೂಲದ 29 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯಿಂದ 10 ಲಕ್ಷ ರೂ. ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ವ್ಯಕ್ತಿಯನ್ನು ಜಸ್ಸು ಅಗರ್ವಾಲ್ ಎಂದು ಗುರುತಿಸಲಾಗಿದೆ. ರಾಜಸ್ಥಾನದಲ್ಲಿ ಬಿಟೆಕ್ ಪದವೀಧರೆಯಾಗಿರುವ ಈಕೆ, 2022 ರಿಂದಲೂ ನಗರದ ಹಲವೆಡೆ ಪಿಜಿಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರು.

ಅಮಾಯಕಳಂತೆ ನಟಿಸಿ ಸಂದರ್ಶನಗಳಿಗೆ ಹಾಜರಾಗುವ ನೆಪದಲ್ಲಿ ಒಂದರಿಂದ ಎರಡು ವಾರಗಳ ಕಾಲ ತಾತ್ಕಾಲಿಕವಾಗಿ ಪಿಜಿಯಲ್ಲಿ ಇರುವುದಾಗಿ ಮಾಲೀಕರ ಮನವೊಲಿಸುತ್ತಿದ್ದ ಈಕೆ, ಬಳಿಕ ತನ್ನ ಕೈಚಳಕ್ಕೆ ಮುಂದಾಗುತ್ತಿದ್ದರು. ಊಟದ ಸಮಯದಲ್ಲಿ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿ ಕೆಲವೇ ಕ್ಷಣಗಳಲ್ಲಿ ಪರಾರಿಯಾಗುತ್ತಿದ್ದರು. ಟಿನ್ ಫ್ಯಾಕ್ಟರಿ, ಮಾರತ್ತಹಳ್ಳಿ, ಬೆಳ್ಳಂದೂರು, ಸಿಲ್ಕ್ ಬೋರ್ಡ್, ಹೆಬ್ಬಾಳ, ಮಹದೇವಪುರ ಮತ್ತು ವೈಟ್‌ಫೀಲ್ಡ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇವರು ಕಳ್ಳತನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಳವು ಮಾಡಲಾದ ಲ್ಯಾಪ್‌ಟಾಪ್‌ಗಳನ್ನು ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಾನಿಕ್ಸ್ ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ತ್ವರಿತವಾಗಿ ಮಾರಾಟ ಮಾಡುತ್ತಿದ್ದಳು, ರೂ 5,000 ರಿಂದ ರೂ 15,000 ವರೆಗಿನ ಗಣನೀಯ ಮೊತ್ತವನ್ನು ಪಡೆಯುತ್ತಿದ್ದಳು. ತರುವಾಯ, ತನ್ನ ಜೇಬುಗಳನ್ನು ತುಂಬಿಕೊಂಡು, ಅಗರ್ವಾಲ್ ರಾಜಸ್ಥಾನದ ತನ್ನ ತವರೂರು ಸೇರುತ್ತಿದ್ದರು. ಜಸ್ಸು ಅಗರ್ವಾಲ್‌ನಿಂದ 24 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT