ಕುಸಿತಿರುವ ಸೇತುವೆ. 
ರಾಜ್ಯ

ಕುಮಟಾ: ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ ಕುಸಿತ, ಅಧಿಕಾರಿಗಳಿಗೆ ಗ್ರಾಮಸ್ಥರ ಹಿಡಿಶಾಪ!

ಕುಮಟಾ ತಾಲ್ಲೂಕಿನ ಮಿರ್ಜಾನ್–ಹೆಗಡೆ ತಾರಿಬಾಗಿಲ ಗ್ರಾಮಗಳನ್ನು ಸಂಪರ್ಕಿಸಲು ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆಯ ಕುಸಿದು ಬಿದ್ದಿದ್ದು, ಈ ಮೂಲಕ ಜನರ ಬಹುವರ್ಷಗಳ ಬೇಡಿಕೆ ಮಣ್ಣು ಪಾಲಾಗಿದೆ.

ಕುಮಟಾ (ಉತ್ತರ ಕನ್ನಡ): ಕುಮಟಾ ತಾಲ್ಲೂಕಿನ ಮಿರ್ಜಾನ್–ಹೆಗಡೆ ತಾರಿಬಾಗಿಲ ಗ್ರಾಮಗಳನ್ನು ಸಂಪರ್ಕಿಸಲು ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆಯ ಕುಸಿದು ಬಿದ್ದಿದ್ದು, ಈ ಮೂಲಕ ಜನರ ಬಹುವರ್ಷಗಳ ಬೇಡಿಕೆ ಮಣ್ಣು ಪಾಲಾಗಿದೆ.

ಹೆಗಡೆ, ತಾರಿಬಾಗಿಲು ಸೇರಿ ನಾನಾ ಭಾಗದ ಜನರ ಹಲವು ವರ್ಷಗಳ ಬೇಡಿಕೆಯ ನಂತರ ಹೆಗಡೆ-ತಾರಿಬಾಗಿಲು ಗ್ರಾಮಗಳ ಸಂಪರ್ಕಿಸಲು ಸೇತುವೆ ಕಾಮಗಾರಿಯನ್ನು ಒಂದು ವರ್ಷದ ಹಿಂದೆ ಆರಂಭಿಸಲಾಗಿತ್ತು. ಆದರೆ, ಬುಧವಾರ ಮಧ್ಯಾಹ್ನ ಸೇತುವೆಯ ಮಧ್ಯಭಾಗ ಏಕಾಏಕಿ ಕುಸಿದು ಬಿದ್ದಿದೆ.

ಪಿಲ್ಲರ್‌ಗಳ ನಡುವೆ ಸೇತುವೆಗೆ ಹಾಕಲಾಗಿದ್ದ ಸ್ಲ್ಯಾಬ್‌ಗಳು ಕುಸಿತವಾಗಿವೆ. ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆಯೇ ಕುಸಿದುಬಿದ್ದ ಪರಿಣಾಮ ಸೇತುವೆ ಕೆಳಗಿದ್ದ ಟ್ರಕ್, ಜೆಸಿಬಿ ಹಾಗೂ ಕಾರು ಜಖಂ ಆಗಿವೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೇತುವೆಯ ಕಳಪೆ ಕಾಮಗಾರಿಯಿಂದಲೇ ಸೇತುವೆ ಕುಸಿತಗೊಂಡಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಕನ್ನಡಪರ ಹೋರಾಟಗಾರ ಭಾಸ್ಕರ್ ಪಟಗಾರ್ ಮಾತನಾಡಿ, ಮೂರು ಗರ್ಡರ್‌ಗಳು ಕುಸಿದು ಸೇತುವೆಯೂ ಕುಸಿದಿದೆ. ಅದೃಷ್ಟವಶಾತ್, ಈ ಸಮಯದಲ್ಲಿ ಸೇತುವೆಯ ಮೇಲೆ ಕೆಲಸ ಮಾಡುವ ಕಾರ್ಮಿಕರು ಊಟಕ್ಕೆ ಹೋಗಿದ್ದರು. ಒಂದು ವೇಳೆ ಈ ಸಮಯದಲ್ಲಿ ಕೆಲಸ ಮಾಡುತ್ತಿದ್ದರೆ, ಪ್ರಾಣ ಹಾನಿಗಳು ಸಂಭವಿಸುತ್ತಿತ್ತು. ಗುಣಮಟ್ಟವಿಲ್ಲದ ಕಾಮಗಾರಿಗೆ ಅಮಾಯಕರು ಪ್ರಾಣ ತೆರಬೇಕಿತ್ತು ಎಂದು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಲವಾರು ಸೇತುವೆಗಳನ್ನು ನಿರ್ಮಿಸಿರುವ ಕುಂದಾಪುರದ ಡಿ'ಕೋಸ್ಟಾ ಕಂಪನಿಯು ಈ ಯೋಜನೆಯನ್ನು ಕೈಗೆತ್ತಿಕೊಂಡಿತ್ತು ಎಂದು ತಿಳಿದುಬಂದಿದೆ.

ಸೇತುವೆ ನಿರ್ಮಾಣಕ್ಕಾಗಿ ಹಲವು ಬಾರಿ ಪ್ರತಿಭಟಿಸಿ, ಆಂದೋಲನ ನಡೆಸಿ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿದ್ದೆವು. ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾ ಸಚಿವರಾದಾಗ ಸೇತುವೆಗೆ 18.20 ಕೋಟಿ ರೂ. ಮಂಜೂರು ಮಾಡಿದ್ದರು ಎಂದು ಹೆಗಡೆ ನಿವಾಸಿ ಮಂಜುನಾಥ ಪಟಗಾರ ಹೇಳಿದ್ದಾರೆ.

ಮತ್ತೋರ್ವ ಹೋರಾಟಗಾರ ರಾಘವೇಂದ್ರ ಗುಂಗಾ ಮಾತನಾಡಿ, ಸೇತುವೆ ನಿರ್ಮಾಣವಾದರೆ ಕುಮಟಾದಿಂದ ಮಿರ್ಜಾನ್ ವರೆಗಿನ ಸುಮಾರು 11 ಕಿ.ಮೀ ನಡೆದು ಹೋಗುವ ಸಂಕಷ್ಟ ದೂರಾಗುತ್ತಿತ್ತು. ನಿರ್ಮಾಣ ಕಾಮಗಾರಿ ಕಳಪೆಯಾಗಿದೆ ಎಂದು ನಮ್ಮ ಗ್ರಾಮಸ್ಥರು ಹೇಳುತ್ತಲೇ ಇದ್ದರು. ಅನಾಹುತ ಸಂಭವಿಸುತ್ತದೆ ಎಂದೂ ಎಚ್ಚರಿಕೆ ನೀಡಿತ್ತು. ಗ್ರಾಮಸ್ಥರ ಮಾತಿಗೆ ಕಿವಿಗೊಡದ ಅಧಿಕಾರಿಗಳು ಕಾಮಗಾರಿ ಮುಂದುವರಸಿದ್ದರು ಎಂದು ಕಿಡಿಕಾರಿದ್ದಾರೆ.

ಸೇತುವೆ ಕುಸಿತದಿಂದಾಗಿ ಕೆಳಗೆ ನಿಂತಿದ್ದ ಬೃಹತ್ ಗಾತ್ರದ ಕ್ರೇನ್, ಹಿಟಾಚಿ, ದ್ವಿಚಕ್ರ ವಾಹನ ಸೇರಿದಂತೆ ಕೋಟ್ಯಂತರ ಮೌಲ್ಯದ ಪರಿಕರಕ್ಕೆ ಹಾನಿಯಾಗಿದೆ.

ಘಟನೆ ಬಳಿಕ ಸೇತುವೆಯ ಗುಣಮಟ್ಟ ಪರೀಕ್ಷೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ನಡುವೆ ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಹಾಗೂ ಕುಮಟಾ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz crisis: 'ಇರಾನ್ ಯುದ್ಧದಿಂದಾಗಿ ನಾವಿಕರ ಕಳೆದುಕೊಂಡ ಏಕೈಕ ದೇಶ ಭಾರತ': Vikram Misri

ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಬದಲಿಗೆ 'ಸಮೋಸಾ'ಗಳ ಬಗ್ಗೆ ಮಾತನಾಡುತ್ತಿದ್ದ ರಾಘವ್ ಚಡ್ಡಾ: ಎಎಪಿ ಆರೋಪ

'ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ': ರಾಜ್ಯಸಭೆ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ಬಳಿಕ ರಾಘವ್ ಚಡ್ಡಾ ಪ್ರತಿಕ್ರಿಯೆ

West Asia Conflict: ಇರಾನ್-ಇಸ್ರೇಲ್ ಯುದ್ಧದ ನಡುವೆ ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್, ಸೀಮೆಎಣ್ಣೆ ಬೆಲೆ ಏರಿಕೆ!

ಇರಾನ್‌ ಯುದ್ಧದ ನಡುವೆ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಟ್ರಂಪ್ ಆಡಳಿತ!

SCROLL FOR NEXT