ರಾಜ್ಯ

Hottest day for Bengaluru: ನಿನ್ನೆಯ ದಾಖಲೆ ಮುರಿದ ಬೆಂಗಳೂರು, ಇಂದಿನ ತಾಪಮಾನ ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಬೇಸಿಗೆ ಧಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿನ್ನೆ ದಾಖಲೆಯ ತಾಪಮಾನ ದಾಖಲಾಗಿದ್ದ ಬೆಂಗಳೂರಿನಲ್ಲಿ ಇಂದಿನ ತಾಪಮಾನ ಆ ದಾಖಲೆಯನ್ನೂ ಮೀರಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಧಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿನ್ನೆ ದಾಖಲೆಯ ತಾಪಮಾನ ದಾಖಲಾಗಿದ್ದ ಬೆಂಗಳೂರಿನಲ್ಲಿ ಇಂದಿನ ತಾಪಮಾನ ಆ ದಾಖಲೆಯನ್ನೂ ಮೀರಿಸಿದೆ.

ಕಳೆದ 5 ವರ್ಷಗಳಲ್ಲಿ ಬೆಂಗಳೂರು ನಗರವು ಅತ್ಯಂತ ಬಿಸಿ ದಿನವನ್ನು (warmest March day) ನಿನ್ನೆ ಅಂದರೆ ಮಾರ್ಚ್ 29ರನ್ನು ಕಂಡಿತ್ತು. ಆದರೆ ಇಂದು ಅದನ್ನೂ ಮೀರಿಸಿದ ತಾಪಮಾನ ದಾಖಲಾಗಿದೆ.

ನಿನ್ನೆ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ದಾಖಲೆ ಬರೆದಿತ್ತು. ಆದರೆ ಇಂದು 36.6 ಡಿಗ್ರಿ ತಾಪಮಾನ ದಾಖಲಾಗಿ ಈ ದಾಖಲೆಯನ್ನು ಮೀರಿಸಿದೆ. ಆ ಮೂಲಕ ಬೆಂಗಳೂರು ನಗರವು ಅತ್ಯಂತ ಬಿಸಿ ದಿನ ಕಂಡಿದೆ. ಇದು ಕಳೆದ 5 ವರ್ಷಗಳಲ್ಲಿ ಗರಿಷ್ಠ ಎಂದು ಹವಾಮಾನ ಇಲಾಖೆ ಹೇಳಿದೆ.

ಮಾರ್ಚ್ ಕೊನೆಯ ವಾರದಲ್ಲಿ ಸಾಮಾನ್ಯ ಸರಾಸರಿ ನಿರೀಕ್ಷಿತ ತಾಪಮಾನವು 34.2 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಈ ಹಿಂದೆ 1996 ರಲ್ಲಿ ಮಾರ್ಚ್ ತಿಂಗಳಿನಲ್ಲಿ ಬೆಂಗಳೂರು ಅತ್ಯಧಿಕ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ವಿರುದ್ಧ ದಿಕ್ಕಿನಲ್ಲಿ ಗಾಳಿ, ಮಳೆಯೂ ದೂರ

ಬೆಂಗಳೂರಿನಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮಾರ್ಚ್ ಕೊನೆಯ ವಾರದಲ್ಲಿ ನಿರೀಕ್ಷೆಯಂತೆ ಬೆಂಗಳೂರಿನಲ್ಲಿ ಅಲ್ಪ ಪ್ರಮಾಣದಲ್ಲಿಯೂ ಕೂಡ ಮಳೆಯಾಗಲಿಲ್ಲ. ಇದಕ್ಕೆ ಕಾರಣ ಗಾಳಿ ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿರುವುದು. ತಮಿಳುನಾಡು ಮತ್ತು ಮಹಾರಾಷ್ಟ್ರದ ನಡುವೆ ಗಾಳಿ ಸ್ಥಗಿತಗೊಂಡಿದೆ ಎಂದು ಐಎಂಡಿಯ ಹಿರಿಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಹೆಚ್ಚಾಗಲಿದೆ ತಾಪಮಾನ!

ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ಬುಧವಾರ ತಿಳಿಸಿದೆ. ಇದರ ಜೊತೆಗೆ ಏಪ್ರಿಲ್ ಎರಡನೇ ವಾರದಿಂದ ಬೆಂಗಳೂರಿನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೂಡ ಸಂಸ್ಥೆ ನೀಡಿದೆ. ಬೆಂಗಳೂರು ಏಪ್ರಿಲ್‌ನಲ್ಲಿ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾಗಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT