ರಾಜ್ಯ

Hottest day for Bengaluru: ನಿನ್ನೆಯ ದಾಖಲೆ ಮುರಿದ ಬೆಂಗಳೂರು, ಇಂದಿನ ತಾಪಮಾನ ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಬೇಸಿಗೆ ಧಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿನ್ನೆ ದಾಖಲೆಯ ತಾಪಮಾನ ದಾಖಲಾಗಿದ್ದ ಬೆಂಗಳೂರಿನಲ್ಲಿ ಇಂದಿನ ತಾಪಮಾನ ಆ ದಾಖಲೆಯನ್ನೂ ಮೀರಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಧಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿನ್ನೆ ದಾಖಲೆಯ ತಾಪಮಾನ ದಾಖಲಾಗಿದ್ದ ಬೆಂಗಳೂರಿನಲ್ಲಿ ಇಂದಿನ ತಾಪಮಾನ ಆ ದಾಖಲೆಯನ್ನೂ ಮೀರಿಸಿದೆ.

ಕಳೆದ 5 ವರ್ಷಗಳಲ್ಲಿ ಬೆಂಗಳೂರು ನಗರವು ಅತ್ಯಂತ ಬಿಸಿ ದಿನವನ್ನು (warmest March day) ನಿನ್ನೆ ಅಂದರೆ ಮಾರ್ಚ್ 29ರನ್ನು ಕಂಡಿತ್ತು. ಆದರೆ ಇಂದು ಅದನ್ನೂ ಮೀರಿಸಿದ ತಾಪಮಾನ ದಾಖಲಾಗಿದೆ.

ನಿನ್ನೆ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ದಾಖಲೆ ಬರೆದಿತ್ತು. ಆದರೆ ಇಂದು 36.6 ಡಿಗ್ರಿ ತಾಪಮಾನ ದಾಖಲಾಗಿ ಈ ದಾಖಲೆಯನ್ನು ಮೀರಿಸಿದೆ. ಆ ಮೂಲಕ ಬೆಂಗಳೂರು ನಗರವು ಅತ್ಯಂತ ಬಿಸಿ ದಿನ ಕಂಡಿದೆ. ಇದು ಕಳೆದ 5 ವರ್ಷಗಳಲ್ಲಿ ಗರಿಷ್ಠ ಎಂದು ಹವಾಮಾನ ಇಲಾಖೆ ಹೇಳಿದೆ.

ಮಾರ್ಚ್ ಕೊನೆಯ ವಾರದಲ್ಲಿ ಸಾಮಾನ್ಯ ಸರಾಸರಿ ನಿರೀಕ್ಷಿತ ತಾಪಮಾನವು 34.2 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಈ ಹಿಂದೆ 1996 ರಲ್ಲಿ ಮಾರ್ಚ್ ತಿಂಗಳಿನಲ್ಲಿ ಬೆಂಗಳೂರು ಅತ್ಯಧಿಕ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ವಿರುದ್ಧ ದಿಕ್ಕಿನಲ್ಲಿ ಗಾಳಿ, ಮಳೆಯೂ ದೂರ

ಬೆಂಗಳೂರಿನಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮಾರ್ಚ್ ಕೊನೆಯ ವಾರದಲ್ಲಿ ನಿರೀಕ್ಷೆಯಂತೆ ಬೆಂಗಳೂರಿನಲ್ಲಿ ಅಲ್ಪ ಪ್ರಮಾಣದಲ್ಲಿಯೂ ಕೂಡ ಮಳೆಯಾಗಲಿಲ್ಲ. ಇದಕ್ಕೆ ಕಾರಣ ಗಾಳಿ ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿರುವುದು. ತಮಿಳುನಾಡು ಮತ್ತು ಮಹಾರಾಷ್ಟ್ರದ ನಡುವೆ ಗಾಳಿ ಸ್ಥಗಿತಗೊಂಡಿದೆ ಎಂದು ಐಎಂಡಿಯ ಹಿರಿಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಹೆಚ್ಚಾಗಲಿದೆ ತಾಪಮಾನ!

ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಐಎಂಡಿ ಬುಧವಾರ ತಿಳಿಸಿದೆ. ಇದರ ಜೊತೆಗೆ ಏಪ್ರಿಲ್ ಎರಡನೇ ವಾರದಿಂದ ಬೆಂಗಳೂರಿನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೂಡ ಸಂಸ್ಥೆ ನೀಡಿದೆ. ಬೆಂಗಳೂರು ಏಪ್ರಿಲ್‌ನಲ್ಲಿ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾಗಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT