ವಾಹನ ತಪಾಸಣೆ ನಡೆಸುತ್ತಿರುವ ಅಧಿಕಾರಿ. 
ರಾಜ್ಯ

ಲೋಕಸಭೆ ಚುನಾವಣೆ: ಗಡಿ ಭಾಗಗಳಲ್ಲಿ ಸಾರಿಗೆ ಇಲಾಖೆಯಿಂದ ವಾಹನ ತಪಾಸಣೆ ಹೆಚ್ಚಳ

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಯಾವುದೇ ಅಕ್ರಮಗಳು ನಡೆಯದಂತೆ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ವಾಹನ ತಪಾಸಣೆಯನ್ನು ತೀವ್ರಗೊಳಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಯಾವುದೇ ಅಕ್ರಮಗಳು ನಡೆಯದಂತೆ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ವಾಹನ ತಪಾಸಣೆಯನ್ನು ತೀವ್ರಗೊಳಿಸಿದೆ.

ಗಡಿಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿರುವ ಸಾರಿಗೆ ಅಧಿಕಾರಿಗಳು, ವಾಹನಗಳ ದಾಖಲೆಗಳು ಹಾಗೂ ಸರಕುಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ಕರ್ನಾಟಕವು ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಂತಹ ರಾಜ್ಯಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಇಲಾಖೆಯು ಕೇವಲ 15 ಚೆಕ್‌ಪೋಸ್ಟ್‌ಗಳನ್ನು ಹೊಂದಿದೆ, ಆದರೆ ಇತರ ರಾಜ್ಯಗಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ, ಸಾರಿಗೆ, ಪೊಲೀಸ್, ಅಬಕಾರಿ, ವಾಣಿಜ್ಯ ತೆರಿಗೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ವಾಹನಗಳನ್ನು ತಪಾಸಣೆ ನಡೆಸಲವಾಗುತ್ತಿದೆ ಎಂದು ಸಾರಿಗೆ ಆಯುಕ್ತ ಯೋಗೀಶ್ ಅವರು ಹೇಳಿದ್ದಾರೆ.

ಚೆಕ್ ಪೋಸ್ಟ್‌ಗಳಲ್ಲಿ, ಸಾರಿಗೆ ಅಧಿಕಾರಿಗಳು ಮೋಟಾರು ವಾಹನ ಕಾಯ್ದೆಯಡಿ ವಾಹನ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಅಕ್ರಮವಾಗಿ ಹಣ ಅಥವಾ ಮದ್ಯ ಸಾಗಣೆ ಅಥವಾ ಅನುಮಾನಾಸ್ಪದವಾಗಿ ಏನಾದರೂ ಕಂಡುಬಂದಲ್ಲಿ ಕೂಡಲೇ ಅಬಕಾರಿ, ವಾಣಿಜ್ಯ ತೆರಿಗೆ, ಆದಾಯ ತೆರಿಗೆ ಮತ್ತು ಇತರ ಇಲಾಖೆಗಳಿಗೆ ಮಾಹಿತಿ ನೀಡುತ್ತೇವೆ. ಇದುವರೆಗೂ ಯಾವುದೇ ಅಕ್ರಮ ಹಣ ಅಥವಾ ಮದ್ಯ ಸಾಗಾಟಗಳು ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT