ಸಂಗ್ರಹ ಚಿತ್ರ 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉಚಿತ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ: ಜನರಿಂದ ನೀರಸ ಪ್ರತಿಕ್ರಿಯೆ!

ವಿಕ್ಟೋರಿಯಾ ಆಸ್ಪತ್ರೆ ನೀಡುತ್ತಿರುವ ಉಚಿತ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಜನರಿಂದ ನೀರ ಪ್ರತಿಕ್ರಿಯೆ ಕಂಡು ಬರುತ್ತಿದೆ.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ನೀಡುತ್ತಿರುವ ಉಚಿತ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಜನರಿಂದ ನೀರ ಪ್ರತಿಕ್ರಿಯೆ ಕಂಡು ಬರುತ್ತಿದೆ.

ಈ ಶಸ್ತ್ರಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ರೂ.15ರಿಂದ 20 ಲಕ್ಷದವರೆಗೆ ಹಣ ತೆಗೆದುಕೊಳ್ಳುತ್ತಿದೆ. ಆದರೆ, ವಿಕ್ಟೋರಿಯಾ ಆಸ್ಪತ್ರೆಯು ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಹಾಗೂ ಇತರರಿಗೆ ರೂ.15,000 ಶುಲ್ಕದಲ್ಲಿ ಶಸ್ತ್ರಚಿಕಿತ್ಸೆ ನಡೆಸುತ್ತಿದೆ.

ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆಯನ್ನು 2018ರಲ್ಲಿ ಆರಂಭಿಸಲಾಗಿದ್ದು, ಈವರೆಗೂ ಕೇವಲ 250 ಶಸ್ತ್ರಚಿಕಿತ್ಸೆಯನ್ನು ಮಾತ್ರ ಮಾಡಿದೆ.

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಎಸ್ ಅವರು ಮಾತನಾಡಿ, ಆಸ್ಪತ್ರೆಯು ಸುಮಾರು 245 ಶಸ್ತ್ರಚಿಕಿತ್ಸೆಗಳನ್ನು ನಡೆಸಿದೆ, ಇದರಲ್ಲಿ 64.4 (140 ಕೆಜಿ) ಅತ್ಯಧಿಕ BMI ಹೊಂದಿರುವವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಶಸ್ತ್ರಚಿಕಿತ್ಸಾ ವಿಭಾಗದ ಪ್ರೊಫೆಸರ್ ಮತ್ತು ಮಿನಿಮಲ್ ಇನ್ವೇಸಿವ್ ಸರ್ಜರಿ (ಎಂಐಎಸ್) ಮುಖ್ಯಸ್ಥ ಡಾ.ಪ್ರೇಮ್ ಕುಮಾರ್ ಎ ಮಾತನಾಡಿ, ಹೆಚ್ಚಾಗಿ ತಿನ್ನುವವರಿಗೆ ಬೊಜ್ಜು ಬರುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಬೊಜ್ಜು ಸಮಸ್ಯೆಗಳು ಹೆಚ್ಚು ತಿನ್ನುವುದರ ಜೊತೆಗೆ ಹಾರ್ಮೋನ್ ಅಸಮತೋಲನವು ಕೂಡ ಕಾರಣವಾಗುತ್ತದೆ. ಅರಿವಿನ ಕೊರತೆಯಿಂದಾಗಿ ಸಾಕಷ್ಟು ಜನರು ಸ್ಥೂಲಕಾಯತೆಗೆ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗುವ ಬದಲು, ವ್ಯಾಯಾಮ ಮತ್ತು ಆಹಾರ ಪದ್ಧತಿಗಳ ಬದಲಾವಣೆಯನ್ನು ಆಯ್ಕೆ ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.

ಸಾಕಷ್ಟು ಜನರು ಸ್ಥೂಲಕಾಯತೆಗೆ ಚಿಕಿತ್ಸೆಯನ್ನೇ ಪಡೆಯುವುದಿಲ್ಲ. ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಾಗ ಕಾಳಜಿ ತೋರುತ್ತಾರೆ. ಉದಾಹರಣೆಗೆ, ಅತಿಯಾದ ದೇಹದ ಕೊಬ್ಬಿನಿಂದ ಉಸಿರಾಟದ ಸಮಸ್ಯೆ ಎದುರಾದಾಗ ಶ್ವಾಸಕೋಶಶಾಸ್ತ್ರ ವಿಭಾಗಕ್ಕೆ ಹೋದ ರೋಗಿಗಳನ್ನು ಇಲ್ಲಿಗೆ ಶಿಫಾರಸು ಮಾಡಲಾಗುತ್ತದೆ. ಮೂಳೆಚಿಕಿತ್ಸೆ ಮತ್ತು ಹೃದಯ ವಿಭಾಗಗಳಿಂದ ಇಲ್ಲಿಗೆ ರೋಗಿಗಳು ಬರುತ್ತಾರೆ.

ದೈಹಿಕ ಚಟುವಟಿಕೆಯ ಕೊರತೆಯೇ ತೂಕ ಹೆಚ್ಚಾಗಲು ಕಾರಣವೆಂದು ಸಾಕಷ್ಟು ಜನರು ಹೇಳುತ್ತಾರೆ. ಇದಕ್ಕಾಗಿ ಆಹಾರ ಕ್ರಮ ಬದಲಾವಣೆ, ವ್ಯಾಯಾಮ ಮಾಡುತ್ತೇನೆಂದು ಹೇಳುತ್ತಾರೆ. 35 ವರ್ಷಕ್ಕಿಂತ ಮೇಲಿನ ವ್ಯಕ್ತಿಗಳು ಸಾಮಾನ್ಯವಾಗಿ ಆಹಾರ ಮತ್ತು ವ್ಯಾಯಾಮದ ಮೂಲಕ ಫಿಟ್‌ನೆಸ್ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ತಿಳಿಯಬೇಕು. ಸ್ಥೂಲಕಾಯತೆಯನ್ನು ಪರಿಹರಿಸಲು ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮ ಸಾಕಾಗುವುದಿಲ್ಲ ಎಂದು ಡಾ ಕುಮಾರ್ ಹೇಳಿದ್ದಾರೆ.

ಸ್ಥೂಲಕಾಯತೆಯನ್ನು ತಡೆಗಟ್ಟಲು ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಿರ್ಣಾಯಕವಾಗಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಡಾ ಸುಜಾತಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT