ರಾಜ್ಯ

ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1.20 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ

Vishwanath S

ಬೆಂಗಳೂರು: ಐಟಿ ಇಲಾಖೆ ಅಧಿಕಾರಿಗಳು ಇಂದು ಕ್ರಷರ್ ಮಾಲೀಕನ ಮನೆ ಮೇಲೆ ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೃಷ್ಣರಾಜಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಲೋಕೇಶ್ ಮನೆ ಮೇಲೆ ದಾಳಿ ದೊಡ್ಡ ಮಟ್ಟದಲ್ಲಿ ನಗದನ್ನು ಐಟಿ ಇಲಾಖೆ ವಶಕ್ಕೆ ಪಡೆದಿದ್ದಾರೆ.

ಇನ್ನು ಕೆಲದಿನಗಳ ಹಿಂದೆ ಗಡಿಭಾಗದ ಚೆಕ್​ಪೋಸ್ಟ್​ನಲ್ಲಿ ಲೋಕೇಶ್ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿತ್ತು.

SCROLL FOR NEXT