ಸಂಗ್ರಹ ಚಿತ್ರ 
ರಾಜ್ಯ

ತಾಪಮಾನ ಹೆಚ್ಚಳದ ಜೊತೆಗೆ ನೀರಿನ ಅಭಾವ: ನಗರದಲ್ಲಿ ಟೈಫಾಯಿಡ್, ಗ್ಯಾಸ್ಟ್ರೋಎಂಟ್ರೈಟಿಸ್ ಪ್ರಕರಣಗಳಲ್ಲಿ ಹೆಚ್ಚಳ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಬಿಸಿಲಿನ ಬೇಗೆಗೆ ಜನ ಕಂಗಾಲಾಗಿದ್ದಾರೆ. ಬಿಸಿಗಾಳಿ, ನೀರಿನ ಬಿಕ್ಕಟ್ಟು ಮತ್ತಿತರ ಕಾರಣಗಳಿಂದ ನಗರದಲ್ಲಿ ಸೋಂಕುಗಳ ಹರಡುವಿಕೆಯೂ ಹೆಚ್ಚಾಗುತ್ತಿದೆ...

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಬಿಸಿಲಿನ ಬೇಗೆಗೆ ಜನ ಕಂಗಾಲಾಗಿದ್ದಾರೆ. ಬಿಸಿಗಾಳಿ, ನೀರಿನ ಬಿಕ್ಕಟ್ಟು ಮತ್ತಿತರ ಕಾರಣಗಳಿಂದ ನಗರದಲ್ಲಿ ಸೋಂಕುಗಳ ಹರಡುವಿಕೆಯೂ ಹೆಚ್ಚಾಗುತ್ತಿದೆ. ಟೈಫಾಯಿಡ್ ಮತ್ತು ತೀವ್ರವಾದ ಜಠರ ಕರುಳಿನ ಉರಿಯೂತ ಅಥವಾ ಗ್ಯಾಸ್ಟ್ರೋಎಂಟ್ರೈಟಿಸ್ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬರುತ್ತಿದೆ.

ಟೈಫಾಯಿಡ್ ಪ್ರಮುಖವಾಗಿ ನೀರಿನಿಂದ ಹರಡುತ್ತದೆ. ಆದರೆ, ಜಠರ ಹಾಗೂ ಕರುಳು ಸಂಬಂಧಿತ ಸಮಸ್ಯೆಗಳು ಕಲುಷಿತ ನೀರು, ಆಹಾರದಿಂದ ಹರಡುತ್ತವೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ನಿರ್ದೇಶಕಿ ಡಾ ಶೀಲಾ ಮುರಳಿ ಚಕ್ರವರ್ತಿ ಮಾತನಾಡಿ, ಟೈಫಾಯಿಡ್ ಮತ್ತು ಜಠರ ಕರುಳಿನ ಉರಿಯೂತ ಪ್ರಕರಣಗಳ ಗಮನಾರ್ಹ ಹೆಚ್ಚಳಕ್ಕೆ ನೀರಿನ ಬಿಕ್ಕಟ್ಟು ಅಥವಾ ಮಾಲಿನ್ಯ ಕಾರಣವಾಗಿರಬಹುದು. ಇವುಗಳ ಸಾಮಾನ್ಯ ರೋಗಲಕ್ಷಣಗಳಲ್ಲಿ ಜ್ವರ, ಹೊಟ್ಟೆ ನೋವು ಮತ್ತು ಅತಿಸಾರ ಸೇರಿವೆ. ಕಳೆದ ತಿಂಗಳಲ್ಲಿ ಸುಮಾರು 100 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸೋಂಕು ಹರಡದಂತೆ ತಡೆಗಟ್ಟಲು, ರೋಗಪೀಡಿತ ಜನರಿರುವ ಪ್ರದೇಶಗಳಿಗೆ ಪ್ರಯಾಣಿಸುವ ಜನರು ಟೈಫಾಯಿಡ್ ಲಸಿಕೆಯನ್ನು ತೆಗೆದುಕೊಳ್ಳುವುದು ಉತ್ತಮ. ಶುದ್ಧ ಮತ್ತು ಉತ್ತಮ ಕುಡಿಯುವ ನೀರನ್ನೇ ಬಳಸಬೇಕು. ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸೋಂಕು ತಡೆಗಟ್ಟಲು ಕಲುಷಿತ ಆಹಾರ ಸೇವನೆಯಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ.

ನಾರಾಯಣ ಹೆಲ್ತ್ ಸಿಟಿಯ ಇಂಟರ್ನಲ್ ಮೆಡಿಸಿನ್‌ನ ಸಲಹೆಗಾರ ಡಾ ನಿಧಿನ್ ಮೋಹನ್ ಮಾತನಾಡಿ, ವೈರಲ್ ಮತ್ತು ಬ್ಯಾಕ್ಟೀರಿಯಾದ ಸೋಂಕಿನಿಂದ ಜಠರಗರುಳಿನ ಪ್ರಕರಣಗಳ ಉಲ್ಬಣವಾಗಬಹುದು. ಸದ್ಯ ವಾರಕ್ಕೆ 20ರಷ್ಟು ಜಠರಗರುಳಿನ ಸೋಂಕಿನ ಪ್ರಕರಣಗಳು ನಮ್ಮ ಆಸ್ಪತ್ರೆಯಲ್ಲಿ ವರದಿಯಾಗುತ್ತಿವೆ. ಇದು ಡಿಸೆಂಬರ್‌ಗೆ ಹೋಲಿಸಿದರೆ ಶೇ 50 ರಷ್ಟು ಹೆಚ್ಚಾಗಿದೆ. ಕಲುಷಿತ ನೀರು ಮತ್ತು ಸರಿಯಾಗಿ ಬೇಯಿಸದ ಮಾಂಸಾಹಾರದಿಂದ ಈ ಸೋಂಕು ಹರಡುತ್ತಿದೆ ಎಂದು ತಿಳಿಸಿದ್ದಾರೆ.

ಸದ್ಯ ಒಂದು ವಾರದಲ್ಲಿ ಕನಿಷ್ಠ ಎರಡು ಅಥವಾ ಮೂರು ಟೈಫಾಯಿಡ್ ಪ್ರಕರಣಗಳು ವರದಿಯಾಗುತ್ತಿವೆ. ನಿರ್ಜಲೀಕರಣ ಮತ್ತು ಆಲಸ್ಯದಂತಹ ರೋಗಲಕ್ಷಣಗಳಿಗೆ ತ್ವರಿತ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ ಎಂದಿದ್ದಾರೆ.

ಅಪಾಯಗಳನ್ನು ಕಡಿಮೆ ಮಾಡಲು ಜನರು ಮಾಂಸಾಹಾರಿ ಊಟವನ್ನು ಸಂಪೂರ್ಣವಾಗಿ ಬೇಯಿಸಬೇಕು ಮತ್ತು ಶುದ್ಧ ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ,

BWSSB ಮುಖ್ಯಸ್ಥ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಜಲ ಮಂಡಳಿಯು ಕೇವಲ ಎರಡು ವಾರಗಳಲ್ಲಿ ತ್ಯಾಜ್ಯ ನೀರನ್ನು ಶೂನ್ಯ ಬ್ಯಾಕ್ಟೀರಿಯಾ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಸ್ಥಳೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು IISc ಯೊಂದಿಗೆ ಕೈಜೋಡಿಸಿದೆ ಎಂದು ಹೇಳಿದ್ದಾರೆ.

ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸುವುದರಿಂದ ಕಾವೇರಿ ನದಿ ನೀರಿನ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಸಂಸ್ಕರಿಸಿದ ನೀರನ್ನು ಬಳಸುವ ಜನರ ಮನಸ್ಥಿತಿಯನ್ನು ಬದಲಾಯಿಸುವುದು ಮಂಡಳಿಯ ಹೊಸ ಮೈಲಿಗಲ್ಲಾಗಿದೆ. ನಗರದಲ್ಲಿ ದಿನಕ್ಕೆ ಸುಮಾರು 1,800 ಮಿಲಿಯನ್ ಲೀಟರ್ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತದೆ. ಇದರಲ್ಲಿ 1,200 MLD ಅನ್ನು BWSSB ಯ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲಕ ಸಂಸ್ಕರಿಸಲಾಗುತ್ತದೆ. ಸಂಸ್ಕರಿಸಿದ ನೀರಿನಲ್ಲಿ ಇರುವ ಸೂಕ್ಷ್ಮಾಣುಜೀವಿಗಳು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿವೆ. ಇದನ್ನು ತಪ್ಪಿಸಲು ಈ ನೀರನ್ನು ಮಾನವ ಸಂಪರ್ಕವಿಲ್ಲದ ಚಟುವಟಿಕೆಗಳಿಗೆ ಮಾತ್ರ ಬಳಸುವಂತೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT