ಸಂಗ್ರಹ ಚಿತ್ರ 
ರಾಜ್ಯ

ರಾತ್ರಿ ವೇಳೆ ಕಟ್ಟಡ ನಿರ್ಮಾಣ ಮಾಡಿ ಬಿಲ್ಡರ್‌ಗಳು ನಿಯಮ ಉಲ್ಲಂಘಿಸುತ್ತಿದ್ದಾರೆ: ವೈಟ್‌ಫೀಲ್ಡ್ ನಿವಾಸಿಗಳ ಆರೋಪ

ರಾತ್ರಿ ವೇಳೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ ಎಂಬ ಬಿಬಿಎಂಪಿ ನಿಯಮಾವಳಿಯನ್ನು ಬಿಲ್ಡರ್‌ಗಳು ಉಲ್ಲಂಘಿಸುತ್ತಿದ್ದಾರೆ ಎಂದು ವೈಟ್‌ಫೀಲ್ಡ್ ನಿವಾಸಿಗಳು ಮಹದೇವಪುರ ವಲಯದ ಜಂಟಿ ಆಯುಕ್ತರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ರಾತ್ರಿ ವೇಳೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ ಎಂಬ ಬಿಬಿಎಂಪಿ ನಿಯಮಾವಳಿಯನ್ನು ಬಿಲ್ಡರ್‌ಗಳು ಉಲ್ಲಂಘಿಸುತ್ತಿದ್ದಾರೆ ಎಂದು ವೈಟ್‌ಫೀಲ್ಡ್ ನಿವಾಸಿಗಳು ಮಹದೇವಪುರ ವಲಯದ ಜಂಟಿ ಆಯುಕ್ತರಿಗೆ ದೂರು ನೀಡಿದ್ದಾರೆ.

ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್‌ಫೀಲ್ಡ್ ರಸ್ತೆಯ ಇಸಿಸಿ ರಸ್ತೆಯಲ್ಲಿ ಶಬ್ದ ಮಾಲಿನ್ಯದ ಜೊತೆಗೆ ನಿರ್ಮಾಣ ಚಟುವಟಿಕೆ ಕಂಡುಬಂದಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾರ್ಯಕರ್ತ ಸಂದೀಪ್ ಅನಿರುಧನ್ ಆರೋಪಿಸಿದ್ದಾರೆ.

2012 ರಲ್ಲಿ, ಕರ್ನಾಟಕ ಹೈಕೋರ್ಟ್ ಶಬ್ದ ಮಾಲಿನ್ಯ ನಿಯಮಗಳನ್ನು ಪರಿಗಣಿಸಿ, ನಿರ್ಮಾಣ ಕಾರ್ಯವನ್ನು ವನ್ನು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮಾತ್ರ ನಡೆಸಬಹುದು ಎಂದು ಆದೇಶಿಸಿತ್ತು.

ಆದೇಶದ ನಡುವಲ್ಲೂ ಮಂಗಳವಾರ ಮಧ್ಯರಾತ್ರಿ 1 ಗಂಟೆಯವರೆಗೆ ನಿರ್ಮಾಣ ಚಟುವಟಿಕೆ ನಡೆದಿದೆ, ಬಿಲ್ಡರ್‌ಗಳಿಗೆ ಕೆಲ ರಾಜಕೀಯ ನಾಯಕರ ಸಂಪರ್ಕವಿದೆ ಎಂದೆನಿಸತ್ತಿದೆ. ಈ ಬಗ್ಗೆ ಉನ್ನತ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಂಟಿ ಆಯುಕ್ತೆ ಕೆ ದಾಕ್ಷಾಯಿಣಿ ಮಾತನಾಡಿ, ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಅಧಿಕಾರಿಗಳು ಮಧ್ಯ ಪ್ರವೇಶಿಸಿಬಹುದು. ಈ ಸಂಬಂಧ ಪರಿಶೀಲನೆ ನಡೆಸುವಂತೆ ಹಾಗೂ ಸ್ಥಳೀಯ ಪೊಲೀಸರೊಂದಿಗೆ ಸಹಕಾರ ನೀಡುವಂತೆಎಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸ್ಥಳಕ್ಕೆ ಬಿಬಿಎಂಪಿ ಎಂಜಿನಿಯರ್‌ಗಳನ್ನು ಕರೆದೊಯ್ದು ತನಿಖೆ ನಡೆಸುತ್ತೇವೆ ಎಂದು ವೈಟ್‌ಫೀಲ್ಡ್ ವಲಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT