ತಂದೆ ಈಶ್ವರಪ್ಪ ಜೊತೆಗಿರುವ ಕಾಂತೇಶ್ (ಸಂಗ್ರಹ ಚಿತ್ರ) 
ರಾಜ್ಯ

ಈಶ್ವರಪ್ಪ ಪುತ್ರ ಕಾಂತೇಶ್‌ ವಿರುದ್ಧ ಅಶ್ಲೀಲ ಫೋಟೊ, ವೀಡಿಯೊ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಚ್ಛಾಟಿತ ಬಿಜೆಪಿ ನಾಯಕ ಕೆ ಎಸ್‌ ಈಶ್ವರಪ್ಪನವರ ಪುತ್ರ ಕೆ ಇ ಕಾಂತೇಶ್‌ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವಿಡಿಯೋ, ಸ್ಕ್ರೀನ್‌ ಶಾಟ್‌ ಅಥವಾ ಅಶ್ಲೀಲ ಆಡಿಯೊಗಳನ್ನು...

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಚ್ಛಾಟಿತ ಬಿಜೆಪಿ ನಾಯಕ ಕೆ ಎಸ್‌ ಈಶ್ವರಪ್ಪನವರ ಪುತ್ರ ಕೆ ಇ ಕಾಂತೇಶ್‌ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವಿಡಿಯೋ, ಸ್ಕ್ರೀನ್‌ ಶಾಟ್‌ ಅಥವಾ ಅಶ್ಲೀಲ ಆಡಿಯೊಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ಮಧ್ಯಂತರ ಪ್ರತಿಬಂಧಕಾದೇಶ ಮಾಡಿದೆ.

ಕೆ ಇ ಕಾಂತೇಶ್‌ ಸಲ್ಲಿಸಿರುವ ಮೂಲ ದಾವೆಯ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಡಿ ಪಿ ಕುಮಾರಸ್ವಾಮಿ ಈ ಆದೇಶ ಮಾಡಿದ್ದಾರೆ.

1ರಿಂದ 50ನೇ ಪ್ರತಿವಾದಿಗಳು, ಅವರ ಪ್ರತಿನಿಧಿಗಳು, ಸೇವಕರು, ಏಜೆಂಟರು, ಆಡಳಿತಗಾರರು, ಅವರು ನಿಯೋಜಿಸಿದವರು ಇತ್ಯಾದಿ ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿರುವಂತೆ ಯಾವುದೇ ತೆರನಾದ ಅಶ್ಲೀಲ ವಿಡಿಯೊ ಪ್ರಸಾರ/ಮದ್ರಣ/ಹಂಚಿಕೆ ಮಾಡದಂತೆ ಪ್ರತಿವಾದಿಗಳ ವಿರುದ್ಧ ಮಧ್ಯಂತರ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ಪ್ರತಿವಾದಿ ಮಾಧ್ಯಮಗಳಿಗೆ ನೋಟಿಸ್‌, ಸಮನ್ಸ್‌ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್‌ 3ಕ್ಕೆ ಮುಂದೂಡಿದೆ.

ಫಿರ್ಯಾದಿ ಕಾಂತೇಶ್‌ ಪರ ವಕೀಲ ಎಂ ವಿನೋದ್‌ ಕುಮಾರ್‌ ಅವರು “ಪ್ರತಿವಾದಿಗಳು ಇಂಟರ್‌ನೆಟ್‌, ಟಿವಿ ಮಾಧ್ಯಮ, ಪತ್ರಿಕೆಗಳಲ್ಲಿ ಫಿರ್ಯಾದಿ ವಿರುದ್ಧ ಆಕ್ಷೇಪಾರ್ಹವಾದ ಸುದ್ದಿ ಪ್ರಸಾರ/ಮುದ್ರಣ ಮಾಡುತ್ತಿದ್ದಾರೆ. ಮಾಧ್ಯಮಗಳು ಫಿರ್ಯಾದಿಯ ವರ್ಚಸ್ಸಿಗೆ ಹಾನಿ ಮಾಡಲು ಯತ್ನಿಸುತ್ತಿವೆ. ಲೋಕಸಭಾ ಚುನಾವಣೆಯಂಥ ಈ ಮಹತ್ವದ ಸಂದರ್ಭದಲ್ಲಿ ಹೆಸರು ಕೆಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಫಿರ್ಯಾದಿಗೆ ಮಾನಹಾನಿಯಿಂದ ರಕ್ಷಣೆ ಅಗತ್ಯವಾಗಿದೆ. ಹೀಗಾಗಿ, ದಾವೆ ಇತ್ಯರ್ಥವಾಗುವವರೆಗೆ ಸಂಬಂಧಿತ ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಬೇಕು ಎಂದು ಕೋರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT