ಡಾ ಜಿ ಪರಮೇಶ್ವರ್  
ರಾಜ್ಯ

ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗದು, ಪುರಾವೆಗಳು ಬೇಕು: ಪ್ರಜ್ವಲ್ ರೇವಣ್ಣ ಬಂಧನ ಬಗ್ಗೆ ಡಾ ಜಿ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ವಿಡಿಯೋ ಪ್ರಕರಣದಲ್ಲಿ ಕೇಸು ದಾಖಲಾಗಿದ್ದರೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್​ಡಿ ರೇವಣ್ಣರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆ ಮತ್ತು ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು ಇದಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಅಪರಾಧ ದಂಡಸಂಹಿತೆಯ (CRPC) ಸೆಕ್ಷನ್ 41ಎ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್​ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಇದರಲ್ಲಿ ಅನೇಕ ಮಹಿಳೆಯರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡಲು ಆಗುವುದಿಲ್ಲ. ಹಾಗಾಗಿಯೇ ಎಸ್​ಐಟಿ ರಚನೆ ಮಾಡಿದ್ದೇವೆ ಎಂದು ಪರಮೇಶ್ವರ ಹೇಳಿದರು.

ಎಸ್​ಐಟಿ ರಚನೆ ಬಳಿಕವೂ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಆದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲವನ್ನು ಎಸ್​ಐಟಿ ಗಮನಿಸುತ್ತದೆ. ಅದಕ್ಕೆ ನಾವೇನೂ ಹೇಳಲು ಬರುವುದಿಲ್ಲ ಎಂದರು.

ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವಣ ಆರೋಪ ಪ್ರತ್ಯಾರೋಪಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಬಹಳ ಜನ ಅದರ ಬಗ್ಗೆ ಹೇಳಿಕೆ ಕೊಡ್ತಿದ್ದಾರೆ. ಅದಕ್ಕೆಲ್ಲ ನಾನು ಉತ್ತರ ಕೊಡಲು ಸಾಧ್ಯವಿಲ್ಲ. ತನಿಖಾ ವರದಿ ಬಂದ ಮೇಲೆ ಏನು ಸತ್ಯಾಸತ್ಯತೆ ಇದೆ ಎಂಬುದರ ಮೇಲೆ ಕ್ರಮ ಆಗುತ್ತದೆ‌. ತನಿಖಾ ವರದಿ ಬರುವ ವರೆಗೂ ಯಾರೂ ಹೇಳಿಕೆ ಕೊಡಬಾರದು ಎಂದರು.

ವಿದೇಶದಲ್ಲಿರೋ ಪ್ರಜ್ವಲ್ ಕರೆ ತರುವ ವಿಚಾರವಾಗಿ ಮಾತನಾಡಿ, ಎಸ್​​ಐಟಿ ಈಗಾಗಲೇ ನೊಟೀಸ್ ಜಾರಿ ಮಾಡಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆ ಎಲ್ಲ ಮಾಹಿತಿ ಇದೆ. ವಾಪಸ್ ಕರೆದುಕೊಂಡು ಬರಲು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಎಸ್​ಐಟಿ ಮಾಡಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರವೂ ಬೇಕಾಗಬಹುದು. ಅಥವಾ ಎಸ್​ಐಟಿ ತಂಡದವರೇ ಕರೆದುಕೊಂಡು ಬರಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT