ಇಂಡಿಗೋ ವಿಮಾನ TNIE
ರಾಜ್ಯ

ಇಂಡಿಗೋ ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನಿಸಿದ ವಿದ್ಯಾರ್ಥಿ; ಕೇಸ್ ದಾಖಲು

ಕಳೆದ ಸೋಮವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪ ಮೇಲೆ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿರುದ್ಧ ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಕಳೆದ ಸೋಮವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪ ಮೇಲೆ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿರುದ್ಧ ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಂಡಿಗೋ ಸಂಸ್ಧೆ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿದ ಪೊಲೀಸರು ವಿದ್ಯಾರ್ಥಿ ಕೌಶಿಕ್ ಕರಣ್ ನನ್ನು ಇಂದು ಬಂಧಿಸಿದ್ದು ನಂತರ ಪೊಲೀಸರು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಏಪ್ರಿಲ್ 29ರಂದು 6ಇ-6314 ವಿಮಾನ ಕೋಲ್ಕತ್ತಾದಿಂದ ರಾತ್ರಿ 8.15ಕ್ಕೆ ಟೇಕಾಫ್ ಆಗಿದ್ದು, ರಾತ್ರಿ 10.30ರ ವೇಳೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ತಲುಪಬೇಕಿತ್ತು. ಇನ್ನು ಕರಣ್ ಸೀಟ್ ನಂ. 18E ನಲ್ಲಿ ಕುಳಿತಿದ್ದನು. ತನ್ನ ಪಕ್ಕದಲ್ಲಿದ್ದ ಸೀಟ್ ನಂ. 18F ನಲ್ಲಿ ತುರ್ತು ನಿರ್ಗಮನ ದ್ವಾರವಿತ್ತು. ವಿಮಾನವು ಬೆಂಗಳೂರು ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಾಗ ತುರ್ತು ಬಾಗಿಲಿನ ಸ್ಟಾರ್‌ಬೋರ್ಡ್ ಬದಿಯಿಂದ ಹ್ಯಾಂಡಲ್‌ನಲ್ಲಿರುವ ಫ್ಲಾಪ್ ಕವರ್ ಅನ್ನು ಕರಣ್ ತೆಗೆದುಹಾಕಿದ್ದಾನೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮೂಲಗಳು ತಿಳಿಸಿವೆ.

ವಿಮಾನದ ಪೈಲಟ್ ಕರಣ್ ನನ್ನು ಅಶಿಸ್ತಿನ ಪ್ರಯಾಣಿಕ ಘೋಷಿಸಿದರು. ನಂತರ ವಿಮಾನ ಬೆಂಗಳೂರಿಗೆ ಬಂದಿಳಿದ ನಂತರ ಇಂಡಿಗೋ ಭದ್ರತಾ ಸಿಬ್ಬಂದಿ ಮತ್ತು ಸಿಐಎಸ್ಎಫ್ಗೆ ಆತನನ್ನು ಹಸ್ತಾಂತರಿಸಿದನು. ಇನ್ನು ಏರ್‌ಲೈನ್ಸ್ ಸಿಬ್ಬಂದಿ ನಿನ್ನೆ ಮಧ್ಯರಾತ್ರಿ 12.33ಕ್ಕೆ ಕೆಐಎ ಪೊಲೀಸರಿಗೆ ಹಸ್ತಾಂತರಿಸಿದರು. ಇಂಡಿಗೋ ಸಿಬ್ಬಂದಿ ಮೊಹಮ್ಮದ್ ಉಮರ್ ಮಂಗಳವಾರ ಮಧ್ಯಾಹ್ನ ಕೆಐಎಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು IPC 1860 ರ ಸೆಕ್ಷನ್ 336ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಅದು ದುಡುಕಿನ ಅಥವಾ ನಿರ್ಲಕ್ಷ್ಯದ ಕೃತ್ಯವಾಗಿದ್ದು ಜೀವಕ್ಕೆ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತದೆ. ಇದು ಮೂರು ತಿಂಗಳ ಜೈಲು ಶಿಕ್ಷೆ ಅಥವಾ ರೂ 250 ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು 2022ರ ಡಿಸೆಂಬರ್ 10ರಂದು ಚೆನ್ನೈಗೆ ತೆರಳುತ್ತಿದ್ದಾಗ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದಿದ್ದು ಭಾರೀ ಸುದ್ದಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT