ಸಾಂದರ್ಭಿಕ ಚಿತ್ರ 
ರಾಜ್ಯ

ಸ್ನೇಹಿತನ ಮೇಲೆ ಮಚ್ಚಿನಿಂದ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

ಸ್ನೇಹಿತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಶಂಕರಪುರಂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಸ್ನೇಹಿತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಶಂಕರಪುರಂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಚಾಮರಾಜಪೇಟೆ ನಿವಾಸಿ ಶಶಾಂಕ್ (20) ಮತ್ತು ಆತನ ಸ್ನೇಹಿತ ಕೆ.ಜಿ.ನಗರದ ಚಂದನ್ (20) ಎಂದು ಗುರುತಿಸಲಾಗಿದೆ.

ಸಂತ್ರಸ್ತ ಯುವಕನನ್ನು ಹರ್ಷಿತ್ ಕುಮಾರ್ (20) ಎಂದು ಗುರ್ತಿಸಲಾಗಿದೆ. ಈತ ಬುಲ್ ಟೆಂಪಲ್ ರಸ್ತೆಯಲ್ಲಿರುವ ಉಮಾ ಥಿಯೇಟರ್ ಬಳಿ ತನ್ನ ತಂದೆಯೊಂದಿಗೆ ಅಲಂಕಾರಿಕ ಹೂವುಗಳನ್ನು ಮಾರಾಟ ಮಾಡುತ್ತಿದ್ದ.

ಹರ್ಷಿತ್ ಕುಮಾರ್ ತನ್ನ ಪ್ರಿಯತಮೆ ಜೊತೆಗೆ ಚಾಟ್ ಮಾಡುತ್ತಿದ್ದಾನೆ ಎಂದು ಶಂಕಿಸಿದ ಶಶಾಂಕ್, ಅವನ ಮೊಬೈಲ್ ಫೋನ್ ಪರಿಶೀಲಿಸಲು ಮುಂದಾಗಿದ್ದಾನೆ. ಈ ವೇಳೆ ಹರ್ಷಿತ್ ನಿರಾಕರಿಸಿದ್ದಾನೆ. ಬಳಿಕ ಶಶಾಂಕ್ ತನ್ನ ಪ್ರಿಯತಮೆಯ ಫೋನ್ ಪರಿಶೀಲಿಸಿದ್ದಾನೆ. ಈ ವೇಳೆ ಹರ್ಷಿತ್ ಜೊತೆಗೆ ಚಾಟ್ ಮಾಡಿರುವುದು ಪತ್ತೆಯಾಗಿದೆ.

ಬಳಿಕ ತನ್ನ ಮತ್ತೊಬ್ಬ ಸ್ನೇಹಿತ ಚಂದನ್ ಜೊತೆಗೆ ಸೇರಿ ಹರ್ಷಿತ್ ಮೇಲೆ ದಾಳಿ ಮಾಡಲು ಕುಮಾರ್ ಯೋಜನೆ ರೂಪಿಸಿದ್ದಾನೆ.

ಇದರಂತೆ ಏಪ್ರಿಲ್ 28 ರಂದು ರಾತ್ರಿ 8:30 ರ ಸುಮಾರಿಗೆ ಶಶಾಂಕ್ ಮತ್ತು ಚಂದನ್ ಇಬ್ಬರೂ ಹರ್ಷಿತ್ ಅಂಗಡಿಗೆ ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹರ್ಷಿತ್ ಬಲಗೈಗೆ ಗಾಯಗಳಾಗಿದ್ದು, ಎರಡು ಬೆರಳುಗಳನ್ನು ಕಳೆದುಕೊಂಡಿದ್ದಾನೆ. ಘಟನೆ ಬಳಿಕ ಅಂಗಡಿ ಮುಂದೆ ಜನರು ಜಮಾಯಿಸುತ್ತಿದ್ದು, ನಂತರ ಆರೋಪಿಗಳು ಪರಾರಿಯಾಗಿದ್ದಾರೆ. ತಕ್ಷಣ ಹರ್ಷಿತ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹರ್ಶಿತ್ ಪೋಷಕರು ಶಂಕರಪುರಂ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT