ಚುನಾವಣಾ ಆಯೋಗ (ಸಂಗ್ರಹ ಚಿತ್ರ) 
ರಾಜ್ಯ

ಲೋಕಸಭಾ ಚುನಾವಣೆ 2024: ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ರಾಜು ಕಾಗೆಗೆ ಆಯೋಗ ನೋಟಿಸ್!

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಗವಾಡ ಸಹಾಯಕ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದ್ದಾರೆ.

ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಗವಾಡ ಸಹಾಯಕ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಬೇರೊಬ್ಬ ವ್ಯಕ್ತಿಯ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಆರೋಪ ರಾಜು ಕಾಗೆ ಅವರ ಮೇಲಿತ್ತು.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ರಾಜು ಕಾಗೆ ಅವರು, ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜು ಕಾಗೆಯವರ ಹೇಳಿಕೆಗೆ ಬಿಜೆಪಿ ಕಿಡಿಕಾರಿತ್ತು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ, ಕಾಂಗ್ರೆಸ್ ಪಕ್ಷದ ಕಾಗವಾಡ ಶಾಸಕ ರಾಜು ಕಾಗೆ ಅವರು ತಮ್ಮ ಎಲುಬಿಲ್ಲದ ನಾಲಿಗೆಯನ್ನು ಮತ್ತೊಮ್ಮೆ ಹರಿಬಿಟ್ಟಿದ್ದಾರೆ. ಟೀಕೆ ಮಾಡುವುದಕ್ಕೆ ವಿಷಯಗಳು ಇಲ್ಲದೆ ಇದ್ದರೆ, ರಣಹೇಡಿಗಳು ಪ್ರಧಾನಿ ಮೋದಿಯವರ ಸಾವನ್ನು ಬಯಸುತ್ತಾರೆ. 140 ಕೋಟಿ ಭಾರತೀಯರ ಆಶೀರ್ವಾದ ಪ್ರಧಾನಿ ಮೋದಿಯವರಿಗೆ ಇದೆ. ಕಾಂಗ್ರೆಸ್ಸಿಗರು ಅವರ ಸಾವು ಬಯಸಿದಷ್ಟು ಅವರ ಆಯಸ್ಸು ಹೆಚ್ಚುತ್ತದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

ಮಂಡಿಯೂರಿದ ಕೇಂದ್ರ ಸರ್ಕಾರ: ಜೈಲಿನಲ್ಲಿದ್ದ Sonam Wangchuk ಗೆ ಕೊನೆಗೂ ಬಂಧನದಿಂದ ಮುಕ್ತಿ: ಕೇಂದ್ರ ಹೇಳಿದ್ದೇನು?

ಇರಾನ್ ಜೊತೆಗೆ ಸರಣಿ ಮಾತುಕತೆ: ಹಾರ್ಮುಜ್ ಜಲಸಂಧಿ ದಾಟಿದ LPG ಹೊತ್ತ ಭಾರತದ 2 ಹಡಗುಗಳು!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

SCROLL FOR NEXT