ಡಿಕೆ ಸುರೇಶ್ 
ರಾಜ್ಯ

ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಪ್ರಧಾನಿ ಮೋದಿ, ಎಚ್‌ಡಿ ದೇವೇಗೌಡರು ಪ್ರತಿಕ್ರಿಯೆ ನೀಡಲಿ: ಡಿಕೆ ಸುರೇಶ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸುವಂತೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಗುರುವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸುವಂತೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಗುರುವಾರ ಒತ್ತಾಯಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, 'ಜೆಡಿಎಸ್ ಜೊತೆಗಿನ ಮೈತ್ರಿಯ ಭಾಗವಾಗಿರುವ ಜವಾಬ್ದಾರಿ ಹೊತ್ತಿರುವ ಪ್ರಧಾನಿಯವರು ಉತ್ತರ ನೀಡಬೇಕು ಮತ್ತು ಮುಂದಿನ ಕ್ರಮದ ಬಗ್ಗೆ ಮಾರ್ಗದರ್ಶನ ನೀಡಬೇಕು' ಎಂದು ಹೇಳಿದರು.

'ಮೋದಿ ಕರ್ನಾಟಕದ ವಿವಿಧ ಸಮಸ್ಯೆಗಳನ್ನು ರಾಜ್ಯವನ್ನು ಅವಮಾನಿಸಲು ಬೇರೆಡೆಗೆ ಕೊಂಡೊಯ್ಯುತ್ತಾರೆ. ಆದರೆ, ಈ ವಿಚಾರದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಇದಕ್ಕೆ ಪ್ರಧಾನಿಯೇ ನೇರ ಹೊಣೆ. ಈ ಹಿಂದೆ ಲೈಂಗಿಕ ಹಗರಣದ ಬಗ್ಗೆ ಪ್ರಧಾನಿಗೆ ತಿಳಿದಿರಲಿಲ್ಲವೇ? ಸ್ಥಳೀಯ ಬಿಜೆಪಿ ನಾಯಕರು ಅವರಿಗೆ ಪತ್ರ ಬರೆದಿಲ್ಲವೇ?. ಪ್ರಜ್ವಲ್ ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚಿಸಲಾಗಿದ್ದರೂ, ಕುಮಾರಸ್ವಾಮಿ ಅವರ ಉಮೇದುವಾರಿಕೆಯನ್ನು ವಿರೋಧಿಸಿದರೂ, ಬಿಜೆಪಿ ಟಿಕೆಟ್ ನೀಡಿ ಪ್ರಚಾರ ಮಾಡಿದೆ' ಎಂದು ಆರೋಪಿಸಿದರು.

ಕ್ಷುಲ್ಲಕ ವಿಚಾರಗಳಿಗೆ ಪತ್ರಿಕಾಗೋಷ್ಠಿ, ಮನವಿ ಪತ್ರ ಬರೆಯುತ್ತಾರೆ ಎಂದಿರುವ ದೇವೇಗೌಡರು ಮೊಮ್ಮಗನ ಮೇಲಿನ ಆರೋಪಗಳಿಗೆ ಉತ್ತರ ನೀಡಬೇಕು. 'ಅವರು 'ನೂಲಿನಂತೆ ಸೀರೆ' ಎಂಬ ಗಾದೆಯನ್ನು ಅರ್ಥೈಸಬೇಕು' ಎಂದು ವ್ಯಂಗ್ಯವಾಡಿದರು.

ಪ್ರಜ್ವಲ್ ಅವರ ಚಾಲಕ ಕಾರ್ತಿಕ್ ಟೇಪ್ ಸೋರಿಕೆ ಮಾಡಿರುವುದು ಮತ್ತು ಮಲೇಷ್ಯಾಕ್ಕೆ ಪರಾರಿಯಾಗಿರುವುದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಉತ್ತರಿಸಿದ ಸುರೇಶ್, ಕುಮಾರಸ್ವಾಮಿ ಅವರು ಅಂತರರಾಷ್ಟ್ರೀಯ ಸಂಸ್ಥೆಯನ್ನು ನಿರ್ವಹಿಸಿದ್ದಾರೆ ಮತ್ತು ಅದರ ಬಗ್ಗೆ ಎಲ್ಲಾ ಮಾಹಿತಿ ಹೊಂದಿದ್ದಾರೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?