ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ 
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮೊಮ್ಮಗನನ್ನು ರಕ್ಷಿಸಲು ಕಾನೂನು ತಜ್ಞರ ಮೊರೆ ಹೋದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ!

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಇದೇ ವೇಳೆ ಭಾರಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ದೇಶದಿಂದ ಪರಾರಿಯಾಗಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಪ್ರಬಲ ರಕ್ಷಣೆ ನೀಡಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಇದೇ ವೇಳೆ ಭಾರಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ದೇಶದಿಂದ ಪರಾರಿಯಾಗಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಪ್ರಬಲ ರಕ್ಷಣೆ ನೀಡಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗೆ ಕಾಂಗ್ರೆಸ್ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜರ್ಮನಿಯಲ್ಲಿರುವ ಪ್ರಜ್ವಲ್‌ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡುವ ಮೂಲಕ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಜ್ವಲ್ ತಮ್ಮ ವಕೀಲರ ಮೂಲಕ ಎಸ್‌ಐಟಿ ಮುಂದೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದರು.

ಆದರೆ ಮೂಲಗಳ ಪ್ರಕಾರ, ತಮ್ಮ ಮುಂದೆ ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೋರಿರುವ ಪ್ರಜ್ವಲ್ ಅವರ ಅರ್ಜಿಯನ್ನು ಎಸ್‌ಐಟಿ ತಿರಸ್ಕರಿಸುವ ಸಾಧ್ಯತೆಯಿದೆ. ಪ್ರಜ್ವಲ್ ದುಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಆರೋಪಿಯು ಸಾಕ್ಷ್ಯವನ್ನು ನಾಶಪಡಿಸದಂತೆ ಖಚಿತಪಡಿಸಿಕೊಳ್ಳಲು ತನಿಖಾ ತಂಡವು ಅವರನ್ನು ಆದಷ್ಟು ಬೇಗ ವಿಚಾರಣೆಗೆ ಹಾಜರಾಗುವಂತೆ ಸೂಚಿಸುತ್ತಿದೆ.

ಈ ನಿಟ್ಟಿನಲ್ಲಿ ದೇವೇ ಗೌಡರು ಇಲ್ಲಿನ ತಮ್ಮ ನಿವಾಸದಲ್ಲಿ ತಮ್ಮ ಪುತ್ರ ಹಾಗೂ ಪ್ರಜ್ವಲ್ ಅವರ ಚಿಕ್ಕಪ್ಪನಾಗಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕಾನೂನು ತಜ್ಞರನ್ನು ಭೇಟಿ ಮಾಡಿದ್ದಾರೆ. ಪ್ರಜ್ವಲ್ ಅವರ ಪೋಷಕರಾದ ಎಚ್‌ಡಿ ರೇವಣ್ಣ ಮತ್ತು ಭವಾನಿ ಕೂಡ ದೇವೇಗೌಡರನ್ನು ಭೇಟಿ ಮಾಡಿದ್ದಾರೆ.

ದೇವೇಗೌಡರ ಕುಟುಂಬದ ಮೇಲೆ ಒತ್ತಡ ಹೆಚ್ಚಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT