ಎಚ್‌ಡಿ ರೇವಣ್ಣ - ಪ್ರಜ್ವಲ್ ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ಸೆಕ್ಸ್ ಪ್ರಕರಣ: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ, ಸಾಕ್ಷ್ಯಾಧಾರ ಸಂಗ್ರಹ!

ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ವಿರುದ್ಧದ ಲೈಂಗಿಕ ದೌರ್ಜನ್ಯ (Physical abuse) ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ವಿರುದ್ಧದ ಲೈಂಗಿಕ ದೌರ್ಜನ್ಯ (Physical abuse) ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ತೀವ್ರ ಕಾರ್ಯಾಚರಣೆಗೆ ಇಳಿದಿರುವ ವಿಶೇಷ ತನಿಖಾ ತಂಡ (SIT) ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್‌ಗಳಿಗೆ (Farm house) ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.

ಇಂದು ಬೆಳ್ಳಂಬೆಳಿಗ್ಗೆ ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐದು ಜನರ ತಂಡದಿಂದ ಹಾಸನ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆದಿದೆ. ಮುಂಜಾನೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಇದೆ.

ನಿನ್ನೆ ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗುತ್ತಲೇ ಹಾಸನಕ್ಕೆ ಬಂದಿರುವ ಪೊಲೀಸರ ಎರಡು ತಂಡ, ಪಡುವಲಹಿಪ್ಪೆ ಸೇರಿ ಎರಡು ಕಡೆ ಸ್ಥಳ ಪರಿಶೀಲನೆ ನಡೆಸಿದೆ. ಇಂದು ಹೊಳೆನರಸೀಪುರದ ರೇವಣ್ಣ ನಿವಾಸ ಹಾಗು ಹಾಸನದ ಪ್ರಜ್ವಲ್ ನಿವಾಸದಲ್ಲೂ ಪರಿಶೀಲನೆ ನಡೆಸಿ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಕೃತ್ಯ ನಡೆದಿದೆ ಎನ್ನಲಾಗುತ್ತಿರುವ ಹಲವು ಸ್ಥಳಗಳಲ್ಲಿ ಎಸ್‌ಐಟಿ ತನಿಖೆ ನಡೆಸಬೇಕಿದೆ. ಹೀಗಾಗಿ ಹಾಸನದ ಆರ್‌ಸಿ ರಸ್ತೆಯ ಸಂಸದರ ನಿವಾಸ ಹಾಗು ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆಯ ತೋಟದ ಮನೆಯನ್ನು ಎಸ್ಐಟಿ ವಶಕ್ಕೆ ಪಡೆಯುವ ಸಂಭವ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT