ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಂಜಯನಗರದಲ್ಲಿ ಹಳೆ ವೈಷಮ್ಯದಿಂದ ಆಟೋ ಚಾಲಕನ ಹತ್ಯೆ

ಹಳೆ ದ್ವೇಷದ ಹಿನ್ನೆಲೆಯಲ್ಲಿ 42 ವರ್ಷದ ಆಟೋ ಚಾಲಕನಿಗೆ ಡ್ರಾಗರ್ ನಿಂದ ಇರಿದು ಹತ್ಯೆ ಮಾಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೃತರನ್ನು ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ ಎಂದು ಗುರುತಿಸಲಾಗಿದ್ದು, ಇವರು ಆಟೋ ಚಾಲಕರಾಗಿದ್ದರು.

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ 42 ವರ್ಷದ ಆಟೋ ಚಾಲಕನಿಗೆ ಡ್ರಾಗರ್ ನಿಂದ ಇರಿದು ಹತ್ಯೆ ಮಾಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೃತರನ್ನು ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ ಎಂದು ಗುರುತಿಸಲಾಗಿದ್ದು, ಇವರು ಆಟೋ ಚಾಲಕರಾಗಿದ್ದರು.

ನಾಗಶೆಟ್ಟಿಹಳ್ಳಿ ಬಸ್ ನಿಲ್ದಾಣದಲ್ಲಿ ಮೂರ್ತಿ ಮತ್ತು ಸಚಿನ್ ನಡುವೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ಆರೋಪಿ ಕಿರಣ್, ಮೂರ್ತಿ ಜೊತೆಗೆ ಹಳೆ ವೈಷಮ್ಯ ಹೊಂದಿದ್ದ ರೌಡಿ ಶೀಟರ್ ಶರಣಪ್ಪನನ್ನು ಕರೆದಿದ್ದಾನೆ. ಜಗಳವಾಡುತ್ತಿರುವಾಗ ಶರಣಪ್ಪ ಡ್ರಾಗರ್ ನಿಂದ ಮೂರ್ತಿಗೆ ಇರಿದಿದ್ದಾನೆ. ನಂತರ ಕಿರಣ್ ಮತ್ತು ಶರಣಪ್ಪ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದಾರಿಹೋಕರು ಮೂರ್ತಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಮೂವರೂ ಒಂದೇ ಪ್ರದೇಶದ ನಿವಾಸಿಗಳಾಗಿದ್ದು, ಅವರ ಹಳೆ ವೈಷಮ್ಯವೇ ಮೂರ್ತಿಗೆ ಇರಿತಕ್ಕೆ ಕಾರಣ ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT