ಫೋಟೋ ಹಂಚುತ್ತಿರುವ ಬಿಜೆಪಿ ಅಭ್ಯರ್ಥಿ ಬೆಂಬಲಿಗರು 
ರಾಜ್ಯ

ಚಿಕ್ಕೋಡಿ-ಬೆಳಗಾವಿ ಲೋಕಸಭೆ ಕ್ಷೇತ್ರ: ಮತದಾರರನ್ನು 'ಬುಟ್ಟಿ'ಗೆ ಹಾಕಿಕೊಳ್ಳಲು ಅಭ್ಯರ್ಥಿಗಳ 'ಭಕ್ತಿ' ತಂತ್ರ!

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳಲು ಮತ್ತೊಂದು ಉಪಾಯವನ್ನು ಕಂಡು ಹಿಡಿದುಕೊಂಡಿದ್ದಾರೆ.

ಬೆಳಗಾವಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳಲು ಮತ್ತೊಂದು ಉಪಾಯವನ್ನು ಕಂಡು ಹಿಡಿದುಕೊಂಡಿದ್ದಾರೆ. ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ‘ದೇವರ ಭಯ’ ಇರುವ ಮತದಾರರನ್ನು ಓಲೈಸಲು ದೇವರು ಮತ್ತು ಸ್ವಾಮೀಜಿಗಳ ಚಿತ್ರಗಳು, ಭಾವಚಿತ್ರಗಳು ಮತ್ತು ಪುಸ್ತಕಗಳನ್ನು ಹಂಚುತ್ತಿದ್ದಾರೆ.

ಅಂತಹ ಮತದಾರರು ತಮಗೆ ಮೋಸ ಮಾಡುವುದಿಲ್ಲ, ಮೇ 7 ರಂದು ಖಂಡಿತವಾಗಿಯೂ ತಮ್ಮ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಅವರು ನಂಬಲು ಬಯಸುತ್ತಾರೆ. ಭಕ್ತಿ, ಭಾವನೆ ಅಥವಾ ಸಂಬಂಧ, ಯಾವುದೇ ರೀತಿಯಲ್ಲಾದರೂ ಮತದಾರರು ತಮಗೆ ಮತ ಹಾಕಿಸಿಕೊಳ್ಳಲು ಅಭ್ಯರ್ಥಿಗಳು ಪ್ರಯತ್ನ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ದೇವಾನುದೇವತೆಗಳು ಮತ್ತು ದೇವಾಲಯಗಳ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರವು ಬಹಳ ಹಿಂದೆಯೇ ಪ್ರಾರಂಭವಾಯಿತು. ಆದರೆ ಇದೀಗ ಕೆಲ ಅಭ್ಯರ್ಥಿಗಳ ಬೆಂಬಲಿಗರು ಈ ಭಾವಚಿತ್ರ ಹಾಗೂ ಪುಸ್ತಕಗಳೊಂದಿಗೆ ಮತದಾರರ ಮನೆ ಬಾಗಿಲಿಗೆ ತಲುಪುತ್ತಿದ್ದಾರೆ. ನಿರೀಕ್ಷೆಯಂತೆ, ಬಿಜೆಪಿ ಬೆಂಬಲಿಗರು ಬೆಳಗಾವಿಯಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಅಯೋಧ್ಯೆ ರಾಮ ಮಂದಿರ ಮತ್ತು ಭಗವಾನ್ ರಾಮನ ಫೋಟೋಗಳನ್ನು ನೀಡುತ್ತಿದ್ದಾರೆ. ಹನುಮ ಜಯಂತಿ ದಿನದಂದು ಬಿಜೆಪಿ ಬೆಂಬಲಿಗರು ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಮತದಾರರ ಮನೆ ಬಾಗಿಲಿಗೆ ಹನುಮಾನ್ ಭಾವಚಿತ್ರ ಮತ್ತು ಪ್ರಸಾದವನ್ನು ವಿತರಿಸಲು ಪ್ರಾರಂಭಿಸಿದಾಗ ಇದು ಪ್ರಾರಂಭವಾಯಿತು. ಅಥಣಿಯಲ್ಲಿ ಶಿವಯೋಗಿ ಹಾಗೂ ಮರಳೂರುಶಂಕರ ಭಾವಚಿತ್ರಗಳನ್ನು ಮತದಾರರಿಗೆ ಹಂಚಲಾಯಿತು. ಈ ಎರಡೂ ದೇವತೆಗಳ ದೇವಾಲಯಗಳು ಅಥಣಿಯಲ್ಲಿ ಪ್ರಸಿದ್ಧವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT