ಪ್ರಜ್ವಲ್ ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ವಿರುದ್ಧ CBI ಬ್ಲೂ ಕಾರ್ನರ್ ನೊಟೀಸ್ ಜಾರಿ ಸಾಧ್ಯತೆ: SIT

ಲೈಂಗಿಕ ಕಿರುಕುಳ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಬಿಐ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹಗರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಲೈಂಗಿಕ ಕಿರುಕುಳ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಬಿಐ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹಗರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ಸಂಬಂಧ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು, ಈ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೂಕ್ತ ಕ್ರಮಗಳೊಂದಿಗೆ ಮುನ್ನಡೆಯಲಿದ್ದೇವೆ. ಸಿಬಿಐ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಲಿದ್ದು, ಇದು ತನಿಖೆಯನ್ನು ಚುರುಕುಗೊಳಿಸಲಿದೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣಗಳಿಂದ ಮಾಹಿತಿ ಪಡೆದ ಕೂಡಲೇ ಆರೋಪಿಗಳನ್ನು ಬಂಧಿಸಿ ವಾಪಸ್ ಕರೆತರುವುದಾಗಿ ಅಧಿಕಾರಿಗಳು (ಎಸ್‌ಐಟಿ ಅಧಿಕಾರಿಗಳು) ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆ ಹೇಳಿದೆ.

ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆಯಿಂದ ಬ್ಲೂ ಕಾರ್ನರ್ ನೋಟಿಸ್ ನೀಡಲಾಗುತ್ತದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೋರಿ ಭಾರತದಲ್ಲಿನ ಇಂಟರ್‌ಪೋಲ್ ವಿಷಯಗಳ ನೋಡಲ್ ಸಂಸ್ಥೆಯಾದ ಸಿಬಿಐಗೆ ಎಸ್‌ಐಟಿ ವಿನಂತಿಯನ್ನು ಕಳುಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಒಂದೊಮ್ಮೆ ಸಿಬಿಐ ಈ ನೋಟಿಸ್ ನೀಡಿದರೆ, ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಸಿಗಲಿದೆ ಎಂದು ಎಸ್‌ಐಟಿ ಭಾವಿಸಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ 33 ವರ್ಷದ ಪ್ರಜ್ವಲ್ ರೇವಣ್ಣ, ಹಾಸನದಿಂದ ಬಿಜೆಪಿ-ಜೆಡಿ (ಎಸ್) ಮೈತ್ರಿಕೂಟದ ಅಭ್ಯರ್ಥಿಯಾಗಿದ್ದರು, ಏಪ್ರಿಲ್ 26 ರಂದು ಚುನಾವಣೆ ನಡೆದಿತ್ತು.

ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ವೀಡಿಯೋ ತುಣುಕುಗಳು ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಹರಿದಾಡಲು ಪ್ರಾರಂಭಿಸಿದವು, ನಂತರ ರಾಜ್ಯ ಸರ್ಕಾರವು ಹಗರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!