ಸಂಗ್ರಹ ಚಿತ್ರ 
ರಾಜ್ಯ

Foxconn ಕಂಪನಿಗೆ 300 ಎಕರೆ ಭೂಮಿ: ಪರಿಹಾರದ ಮೊತ್ತ ನ್ಯಾಯಾಲಯದಲ್ಲಿ ಠೇವಣಿ- KIADB

ಫಾಕ್ಸ್‌ಕಾನ್‌ ಕಂಪನಿಗೆ ವಿತರಿಸಲು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವ 300 ಎಕರೆ ಜಮೀನಿನ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಶುಕ್ರವಾರ ಹೇಳಿದೆ.

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಗೆ ವಿತರಿಸಲು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವ 300 ಎಕರೆ ಜಮೀನಿನ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಶುಕ್ರವಾರ ಹೇಳಿದೆ.

ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಅವರು, ಈ ಗ್ರಾಮಗಳಲ್ಲಿ ರೈತರಿಗೆ ನೇರವಾಗಿ ಪರಿಹಾರ ವಿತರಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಕಾರಣದಿಂದ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಹೇಳಿದ್ದಾರೆ.

ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಅದರಲ್ಲಿ 300 ಎಕರೆಯನ್ನು ಫಾಕ್ಸ್‌ಕಾನ್‌ ಕಂಪನಿಗೆ ಹಂಚಿಕೆ ಮಾಡಲಾಗಿದೆ.

ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ಬೇಲಿ ನಿರ್ಮಿಸಲು ತೆರಳಿದ್ದಾಗ ರೈತರು ಅಡ್ಡಿಪಡಿಸಿದ್ದಾರೆ. ಪೊಲೀಸ್‌ ಭದ್ರತೆಯಲ್ಲಿ ಈ ಜಮೀನುಗಳಿಗೆ ಬೇಲಿ ಹಾಕಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ